September 6, 2026
ಗ್ರಾಮಾಂತರ ಸುದ್ದಿ

ರಕ್ತೇಶ್ವರಿಪದವು ಪೌಷ್ಟಿಕಾಹಾರ ಪೋಷಣ್ ಅಭಿಯಾನ


ರಕ್ತೇಶ್ವರಿ ಪದವು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖ ಹಾಗೂ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ ಮತ್ತು ರಕ್ತೇಶ್ವರಿಪದವು ಅಂಗನವಾಡಿ ಕೇಂದ್ರದ ಜಂಟಿ ಆಶ್ರಯದಲ್ಲಿ ಸೆ.30. ರಂದು ನಡೆಯಿತು.
ಕಣಿಯೂರು ಸರಕಾರಿ ಆಯುಷ್ ಇಲಾಖೆ,ಆಯುರ್ವೇದ ಚಿಕಿತ್ಸಾಲಯ ವೈಧ್ಯಾಧಿಕಾರಿ ಡಾ.ಸಹನಾ ದೀಪ ಬೆಳಗಿಸಿ ಚಾಲನೆ ನೀಡಿದರು.

ಮಹಿಳೆಯರು ಆರೋಗ್ಯವಂತ ಜೀವನವನ್ನು ನಡೆಸಲು ಪೌಷ್ಟಿಕಾಹಾರ ಸೇವನೆಯಿಂದ ಗರ್ಭ ಧರಿಸಿದ ನಂತರ ಹುಟ್ಟಿದ ಮಗು ಸಮಾಜ ಉತ್ತಮ ಆರೋಗ್ಯ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಬೆಳ್ತಂಗಡಿ ಆರೋಗ್ಯ ಇಲಾಖೆ ಕ್ಷೇತ್ರ ಆರೋಗ್ಯ ಅಧಿಕಾರಿ ಶ್ರೀಮತಿ ಅಮ್ಮಿ ಸಿಸ್ಟರ್ ಹೇಳಿದರು.
ಬೆಳ್ತಂಗಡಿ ಸಮುದಾಯ ಆರೋಗ್ಯ ಅಧಿಕಾರಿ ಡಾ.ರೇಷ್ಮಾ,ನಿವೃತ್ತ ಸೈನಿಕ ವಿಕ್ರಂ ಜೆ.ನಿವೃತ್ತ ಸೈನಿಕ ದಿನೇಶ್ ಕುಮಾರ್, ಕೇಳಿಯೇ ಗ್ರಾಮ ಪಂಚಾಯತ್ ಸದಸ್ಯೆ ಮೋಹಿನಿ ನ್ಯಾಯತರ್ಪು ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ವಸಂತ ಕುಮಾರ್,ರಕ್ತೇಶ್ವರಿ ಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಅಧ್ಯಕ್ಷ ವಸಂತ ಗೌಡ ಕೆ,ನೇತಾಜಿ ಕ್ರೀಡಾ ಸಂಘದ ಅಧ್ಯಕ್ಷ ಸಿದ್ದಪ್ಪ ಗೌಡ, ಬಾಲ ವಿಕಾಸ ಸಮಿ ಅಧ್ಯಕ್ಷ ಜಯಶ್ರೀ ರಮೇಶ್,ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಕವಿತಾ ಶ್ರೀ ,ಆಶಾ ಕಾರ್ಯಕರ್ತೆಯರ ಸ್ಪ್ ಸಲಿಟಿ ಗುಣವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ.ಸದಸ್ಯರಾದ ಸುಭಾಷಿಣಿ ಕೆ,ವಿಜಯ ಕುಮಾರ್ ಕೆ, ಮಾಜಿ ಅಧ್ಯಕ್ಷ ತುಕಾರಾಂ ಪೂಜಾರಿ, ಸ್ಥಳೀಯ ಹಿರಿಯರಾದ ಧರ್ಣಪ್ಪ ಗೌಡ, ಜನಾರ್ದನ ಪೂಜಾರಿ, ಆಶಾ ಕಾರ್ಯಕರ್ತೆಯರಾದ ಶಶಿಕಲಾ, ಕೆ,ಪೂರ್ಣಿಮಾ ಕೆ, ಅಂಗನವಾಡಿ ಕಾರ್ಯಕರ್ತರಾದ ನವೀನ ಕುಮಾರಿ,ಶಶಿಕಲಾ ,ಬಾಲವಿಕಾಸ ಸಮಿತಿ ಮಾಜಿ ಅಧ್ಯಕ್ಷರು, ಸದಸ್ಯರು, ಮಕ್ಕಳ ಪೋಷರು ಭಾಗವಹಿಸಿದರು.

ಸನ್ಮಾನ:
ನಿವೃತ್ತ ಸೈನಿಕ ವಿಕ್ರಂ ಜೆ, ಬಾಲ ವಿಕಾಸ ಸಮಿತಿ ಮಾಜಿ ಅಧ್ಯಕ್ಷರಾದ ಪಾವನಗಂಗ ಭಟ್,ಸುರೇಖ ಅವರನ್ನು ಸನ್ಮಾನಿಸಿ ಗೌರವಿಸಿದರು.
ಅಂಗನವಾಡಿ ಕಾರ್ಯಕರ್ತೆ ನಾಗವೇಣಿ ಕೆ.ಎಸ್. ಸ್ವಾಗತಿಸಿ, ವಂದಿಸಿದರು.ಉಮೇಶ್ ಕೇಲ್ದಡ್ಕ ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ಆರೋಗ್ಯ ರಕ್ಷಕರಿಗೆ ರಕ್ಷೆ ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾಬಂಧನ ಆಚರಿಸಿದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು

Suddi Udaya

ಬಳಂಜ ಮನಸ್ವಿನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವಾರ್ಷಿಕ ಮಹಾಸಭೆ

Suddi Udaya

ಎಸ್.ಐ.ಟಿ ತನಿಖೆಯ ತಡೆಯಾಜ್ಞೆ ತೆರವು ಮಾಡಿದ ಹೈಕೋರ್ಟ್

Suddi Udaya

ಫೆ 8:ಬಳಂಜ ಯುವ ಬಿಲ್ಲವ ವೇದಿಕೆಯಿಂದ ವಾರ್ಷಿಕ ಕ್ರೀಡಾಕೂಟ ಬ್ರಹ್ಮಶ್ರೀ-2026: ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ವಿವಿಧ ಸ್ಪರ್ಧೆಗಳು

Suddi Udaya

ಕುಪ್ಪೆಟ್ಟಿ ಸ.ಉ.ಪ್ರಾ.ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya
error: Content is protected !!