July 23, 2026
ಗ್ರಾಮಾಂತರ ಸುದ್ದಿ

ರಕ್ತೇಶ್ವರಿಪದವು ಪೌಷ್ಟಿಕಾಹಾರ ಪೋಷಣ್ ಅಭಿಯಾನ


ರಕ್ತೇಶ್ವರಿ ಪದವು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖ ಹಾಗೂ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ ಮತ್ತು ರಕ್ತೇಶ್ವರಿಪದವು ಅಂಗನವಾಡಿ ಕೇಂದ್ರದ ಜಂಟಿ ಆಶ್ರಯದಲ್ಲಿ ಸೆ.30. ರಂದು ನಡೆಯಿತು.
ಕಣಿಯೂರು ಸರಕಾರಿ ಆಯುಷ್ ಇಲಾಖೆ,ಆಯುರ್ವೇದ ಚಿಕಿತ್ಸಾಲಯ ವೈಧ್ಯಾಧಿಕಾರಿ ಡಾ.ಸಹನಾ ದೀಪ ಬೆಳಗಿಸಿ ಚಾಲನೆ ನೀಡಿದರು.

ಮಹಿಳೆಯರು ಆರೋಗ್ಯವಂತ ಜೀವನವನ್ನು ನಡೆಸಲು ಪೌಷ್ಟಿಕಾಹಾರ ಸೇವನೆಯಿಂದ ಗರ್ಭ ಧರಿಸಿದ ನಂತರ ಹುಟ್ಟಿದ ಮಗು ಸಮಾಜ ಉತ್ತಮ ಆರೋಗ್ಯ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಬೆಳ್ತಂಗಡಿ ಆರೋಗ್ಯ ಇಲಾಖೆ ಕ್ಷೇತ್ರ ಆರೋಗ್ಯ ಅಧಿಕಾರಿ ಶ್ರೀಮತಿ ಅಮ್ಮಿ ಸಿಸ್ಟರ್ ಹೇಳಿದರು.
ಬೆಳ್ತಂಗಡಿ ಸಮುದಾಯ ಆರೋಗ್ಯ ಅಧಿಕಾರಿ ಡಾ.ರೇಷ್ಮಾ,ನಿವೃತ್ತ ಸೈನಿಕ ವಿಕ್ರಂ ಜೆ.ನಿವೃತ್ತ ಸೈನಿಕ ದಿನೇಶ್ ಕುಮಾರ್, ಕೇಳಿಯೇ ಗ್ರಾಮ ಪಂಚಾಯತ್ ಸದಸ್ಯೆ ಮೋಹಿನಿ ನ್ಯಾಯತರ್ಪು ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ವಸಂತ ಕುಮಾರ್,ರಕ್ತೇಶ್ವರಿ ಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಅಧ್ಯಕ್ಷ ವಸಂತ ಗೌಡ ಕೆ,ನೇತಾಜಿ ಕ್ರೀಡಾ ಸಂಘದ ಅಧ್ಯಕ್ಷ ಸಿದ್ದಪ್ಪ ಗೌಡ, ಬಾಲ ವಿಕಾಸ ಸಮಿ ಅಧ್ಯಕ್ಷ ಜಯಶ್ರೀ ರಮೇಶ್,ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಕವಿತಾ ಶ್ರೀ ,ಆಶಾ ಕಾರ್ಯಕರ್ತೆಯರ ಸ್ಪ್ ಸಲಿಟಿ ಗುಣವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ.ಸದಸ್ಯರಾದ ಸುಭಾಷಿಣಿ ಕೆ,ವಿಜಯ ಕುಮಾರ್ ಕೆ, ಮಾಜಿ ಅಧ್ಯಕ್ಷ ತುಕಾರಾಂ ಪೂಜಾರಿ, ಸ್ಥಳೀಯ ಹಿರಿಯರಾದ ಧರ್ಣಪ್ಪ ಗೌಡ, ಜನಾರ್ದನ ಪೂಜಾರಿ, ಆಶಾ ಕಾರ್ಯಕರ್ತೆಯರಾದ ಶಶಿಕಲಾ, ಕೆ,ಪೂರ್ಣಿಮಾ ಕೆ, ಅಂಗನವಾಡಿ ಕಾರ್ಯಕರ್ತರಾದ ನವೀನ ಕುಮಾರಿ,ಶಶಿಕಲಾ ,ಬಾಲವಿಕಾಸ ಸಮಿತಿ ಮಾಜಿ ಅಧ್ಯಕ್ಷರು, ಸದಸ್ಯರು, ಮಕ್ಕಳ ಪೋಷರು ಭಾಗವಹಿಸಿದರು.

ಸನ್ಮಾನ:
ನಿವೃತ್ತ ಸೈನಿಕ ವಿಕ್ರಂ ಜೆ, ಬಾಲ ವಿಕಾಸ ಸಮಿತಿ ಮಾಜಿ ಅಧ್ಯಕ್ಷರಾದ ಪಾವನಗಂಗ ಭಟ್,ಸುರೇಖ ಅವರನ್ನು ಸನ್ಮಾನಿಸಿ ಗೌರವಿಸಿದರು.
ಅಂಗನವಾಡಿ ಕಾರ್ಯಕರ್ತೆ ನಾಗವೇಣಿ ಕೆ.ಎಸ್. ಸ್ವಾಗತಿಸಿ, ವಂದಿಸಿದರು.ಉಮೇಶ್ ಕೇಲ್ದಡ್ಕ ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ಎಸ್ ಎಸ್ ಎಲ್ ಸಿ ಮರು ಮೌಲ್ಯಮಾಪನ: ನಡ ಸರಕಾರಿ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

ಜೂ.21: ಗುರುವಾಯನಕೆರೆ ಅಭಯ ಆಸ್ಪತ್ರೆಯಲ್ಲಿ ಬಂಜೆತನ ತಪಾಸಣಾ ಶಿಬಿರ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಆರೋರ 2K26’ ಕಾಮರ್ಸ್ ಫೆಸ್ಟ್

Suddi Udaya

ಚಾರ್ಮಾಡಿ: ಅಂಗನವಾಡಿ ಸಹಾಯಕಿ ಆತ್ಮಹತ್ಯೆ

Suddi Udaya

ಮರೋಡಿ:ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಕ್ರೀಡಾಂಗಣ ಉದ್ಘಾಟನೆ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆ

Suddi Udaya
error: Content is protected !!