July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

ನೆರಿಯ: ಗಂಡಿಬಾಗಿಲು ಸಂತ ಥೋಮಸ್ ದೇವಾಲಯದಲ್ಲಿ, ಹಿರಿಯ ಸಮಾಜಸೇವಕರಾದ ಮತ್ತು ವಿವಿಧ ಸಂಘ-ಸಂಸ್ಥೆಗಳ ಸದಸ್ಯರಾಗಿರುವ ಚಾಂಡಿ ಅವರನ್ನು, ವೇದಿಕೆಯ ಹಿಂದೆ ಹಲವಾರು ಜನಾನುರಾಗಿ ಕಾರ್ಯಕ್ರಮಗಳ ಮೂಲಕ, ನೆರಿಯ-ಗಂಡಿಬಾಗಿಲು ಪ್ರದೇಶದಲ್ಲಿ ಮನೆ ಮಾತಾಗಿರುವ ಕಾರಣಕ್ಕಾಗಿ, ವಿನ್ಸೆಂಟ್ ಡಿ ಪೌಲ್ ದಿನದಂದು ಸನ್ಮಾನಿಸಲಾಯಿತು.

ಸಮಾಜ ಸೇವೆ ಮತ್ತು ಬಡವರ ಏಳಿಗೆಗಾಗಿ ಅವರು ನೀಡಿದ ಅನೇಕ ಸೇವೆಗಳನ್ನು, ಸ್ಥಳೀಯ ವಿನ್ಸೆಂಟ್ ಸೊಸೈಟಿ, ಬೆಳ್ತಂಗಡಿ ಧರ್ಮಪ್ರಾಂತ್ಯದ ದಕ್ಷಿಣ ಕನ್ನಡ ಗ್ರಾಮೀಣಾಭಿವೃದ್ಧಿ ಸೊಸೈಟಿ (DKRDS), ಮತ್ತು ದೀರ್ಘಾವಧಿ ಕ್ರೆಡಿಟ್ ಯೂನಿಯನ್, ಗಂಡಿಬಾಗಿಲು ಇದರ ಅಧ್ಯಕ್ಷರಾಗಿ, ಚರ್ಚ್ ಪಾಲನಾ ಸಮಿತಿ ಸದಸ್ಯರಾಗಿ, ಟ್ರಸ್ಟಿಯಾಗಿಯೂ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿದ ಕೊಡುಗೆಗಳನ್ನು ಗೌರವಿಸಲಾಯಿತು.

ಚರ್ಚ್ ನ ಧರ್ಮ ಗುರು ವಂ. ಫಾ ಜೋಸ್, ಟ್ರಸ್ಟಿಗಳಾದ ಶಾಜಿ ಮಣ್ಣಿಯೇಕುಂನೆಲ್, ಶಿಜೋ ಕುರಿಯನ್ ಸೇಬಾಸ್ತಿಯನ್ ಎಂ ಜೆ ಮೊದಲಾದವರು ಉಪಸ್ಥಿತರಿದ್ದರು. ಸಂಡೆ ಸ್ಕೂಲ್ ಮುಖ್ಯೋಪಾಧ್ಯಾಯ ಶಿಜು ಸಿ ವಿ ಕಾರ್ಯಕ್ರಮ ನಿರೂಪಿಸಿದರು.

Related posts

ಕನ್ಯಾಡಿ ಶ್ರೀ ಸದಾಶಿವೇಶ್ವರ ಭಜನಾ ಮಂಡಳಿಯ ವಾರ್ಷಿಕೋತ್ಸವ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.1.85ಕೋಟಿ ನಿವ್ವಳ ಲಾಭ, ಶೇ.14 ಡಿವಿಡೆಂಟ್ ಘೋಷಣೆ

Suddi Udaya

ಗಂಡಿಬಾಗಿಲಿನ ಸೈಂಟ್ ತೋಮಸ್ ಚರ್ಚಿನಲ್ಲಿ ಗುಡ್ ಫ್ರೈಡೆ ಪ್ರಯುಕ್ತ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಆರೋಗ್ಯ ಸೇವೆಯ ಬೆನ್ನೆಲುಬಾದ ಆಶಾ ಕಾರ್ಯಕರ್ತೆಯರಿಗೆ ನ್ಯಾಯ ನೀಡಿ: ಭಾರತೀಯ ಮಜ್ದೂರು ಸಂಘ ಆಗ್ರಹ

Suddi Udaya

ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿಮರ ಸ್ಥಾಪನೆ

Suddi Udaya
error: Content is protected !!