24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

ನೆರಿಯ: ಗಂಡಿಬಾಗಿಲು ಸಂತ ಥೋಮಸ್ ದೇವಾಲಯದಲ್ಲಿ, ಹಿರಿಯ ಸಮಾಜಸೇವಕರಾದ ಮತ್ತು ವಿವಿಧ ಸಂಘ-ಸಂಸ್ಥೆಗಳ ಸದಸ್ಯರಾಗಿರುವ ಚಾಂಡಿ ಅವರನ್ನು, ವೇದಿಕೆಯ ಹಿಂದೆ ಹಲವಾರು ಜನಾನುರಾಗಿ ಕಾರ್ಯಕ್ರಮಗಳ ಮೂಲಕ, ನೆರಿಯ-ಗಂಡಿಬಾಗಿಲು ಪ್ರದೇಶದಲ್ಲಿ ಮನೆ ಮಾತಾಗಿರುವ ಕಾರಣಕ್ಕಾಗಿ, ವಿನ್ಸೆಂಟ್ ಡಿ ಪೌಲ್ ದಿನದಂದು ಸನ್ಮಾನಿಸಲಾಯಿತು.

ಸಮಾಜ ಸೇವೆ ಮತ್ತು ಬಡವರ ಏಳಿಗೆಗಾಗಿ ಅವರು ನೀಡಿದ ಅನೇಕ ಸೇವೆಗಳನ್ನು, ಸ್ಥಳೀಯ ವಿನ್ಸೆಂಟ್ ಸೊಸೈಟಿ, ಬೆಳ್ತಂಗಡಿ ಧರ್ಮಪ್ರಾಂತ್ಯದ ದಕ್ಷಿಣ ಕನ್ನಡ ಗ್ರಾಮೀಣಾಭಿವೃದ್ಧಿ ಸೊಸೈಟಿ (DKRDS), ಮತ್ತು ದೀರ್ಘಾವಧಿ ಕ್ರೆಡಿಟ್ ಯೂನಿಯನ್, ಗಂಡಿಬಾಗಿಲು ಇದರ ಅಧ್ಯಕ್ಷರಾಗಿ, ಚರ್ಚ್ ಪಾಲನಾ ಸಮಿತಿ ಸದಸ್ಯರಾಗಿ, ಟ್ರಸ್ಟಿಯಾಗಿಯೂ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿದ ಕೊಡುಗೆಗಳನ್ನು ಗೌರವಿಸಲಾಯಿತು.

ಚರ್ಚ್ ನ ಧರ್ಮ ಗುರು ವಂ. ಫಾ ಜೋಸ್, ಟ್ರಸ್ಟಿಗಳಾದ ಶಾಜಿ ಮಣ್ಣಿಯೇಕುಂನೆಲ್, ಶಿಜೋ ಕುರಿಯನ್ ಸೇಬಾಸ್ತಿಯನ್ ಎಂ ಜೆ ಮೊದಲಾದವರು ಉಪಸ್ಥಿತರಿದ್ದರು. ಸಂಡೆ ಸ್ಕೂಲ್ ಮುಖ್ಯೋಪಾಧ್ಯಾಯ ಶಿಜು ಸಿ ವಿ ಕಾರ್ಯಕ್ರಮ ನಿರೂಪಿಸಿದರು.

Related posts

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯ ಅಮೋಘ ಸಾಧನೆ- ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ ಪ್ರಾರ್ಥನಾ

Suddi Udaya

ಆರಂಬೋಡಿ ಗ್ರಾ.ಪಂ. ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸ್ವಚ್ಚತೆಯೇ ಸೇವೆ ಕಾರ್ಯಕ್ರಮದಡಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಭರತನಾಟ್ಯ ವಿಧ್ವತ್ ಅಂತಿಮ ಪರೀಕ್ಷೆ : ಗುರುವಾಯನಕೆರೆಯ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ನಾವೂರು ಸ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ ಹಾಗೂ ನೂತನ ಎಲ್ ಕೆಜಿ ತರಗತಿ ಪ್ರಾರಂಭ

Suddi Udaya

ವಿಷ ಪದಾರ್ಥ ಸೇವಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya
error: Content is protected !!