25.8 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

ಬೆಳ್ತಂಗಡಿ:ಮನೆಗೆ ಸಿಡಿಲು ಬಡಿದ ಪರಿಣಾಮ ಭಾರೀ ಹಾನಿಯಾದ ಘಟನೆ ಉರುವಾಲು ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ.

ಉರುವಾಲು ಗ್ರಾಮದ ತಾರಿದಡಿ ಸೇಸಪ್ಪ ಎಂಬವರ ಮನೆಗೆ ಸಂಜೆ ಸುಮಾರು ನಾಲ್ಕು ಗಂಟೆ ಸುಮಾರಿಗೆ ಸಿಡಿಲು ಬಡಿದಿದ್ದು ಪರಿಣಾಮ ಗೋಡೆ ಬಿರುಕು ಬಿಟ್ಟು ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಸೇಸಪ್ಪ ಅವರು ಸಂಜೆ ಸುಮಾರು 3.45 ರಿಂದ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಈ ವೇಳೆ ಶಾಲೆಯಿಂದ ಮಕ್ಕಳನ್ನು ಕರೆದುಕೊಂಡು ಬರಲು ಹೋಗಿದ್ದು ಮನೆಗೆ ಬಂದು ನೋಡಿದಾಗ ಸಿಡಿಲು ಬಡಿದು ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿದೆಯಲ್ಲದೇ ಗೋಡೆಯಿಂದ ಕಿತ್ತು ಬಂದಿದೆ. ಅಲ್ಲಲ್ಲಿ ಗೋಡೆ ಬಿರುಕು ಬಿಟ್ಟಿದೆ. ಶೌಚಾಲಯದ ಗೋಡೆ ಸಂಪೂರ್ಣ ಹಾನಿಗೊಳಗಾಗಿದೆ. ಅದೃಷ್ಟವಶಾತ್ ಮಕ್ಕಳನ್ನು ಕರೆ ತರಲು ನಾವು ಶಾಲೆಗೆ ಹೋಗಿದ್ದರಿಂದ ಮಕ್ಕಳಿಗೆ ಹಾಗೂ ನಮಗೆ ಏನು ತೊಂದರೆ ಅಗಿಲ್ಲ, ಸಿಡಿಲು ಬಡಿತದಿಂದ ಮನೆಗೆ ಸಂಪೂರ್ಣ ಹಾನಿಯಾಗಿದೆ.

ಈ ಬಗ್ಗೆ ಪಂಚಾಯತ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಅವರು ಸ್ಥಳಕ್ಕೆ ಬಂದು ಪರಿಶೀಲಿಸುವುದಾಗಿ ಹೇಳಿದ್ದಾರೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

Related posts

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

Suddi Udaya

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

Suddi Udaya

ತೋಟತ್ತಾಡಿ: ವಿದ್ಯುತ್ ಅವಘಡದಿಂದ ಗುಡ್ಡಕ್ಕೆ ಬೆಂಕಿ

Suddi Udaya

ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಹಾಗೂ ಕ್ರೀಡಾ ಶಿಬಿರ ಉದ್ಘಾಟನೆ

Suddi Udaya
error: Content is protected !!