22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

ಬೆಳ್ತಂಗಡಿ:ಮನೆಗೆ ಸಿಡಿಲು ಬಡಿದ ಪರಿಣಾಮ ಭಾರೀ ಹಾನಿಯಾದ ಘಟನೆ ಉರುವಾಲು ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ.

ಉರುವಾಲು ಗ್ರಾಮದ ತಾರಿದಡಿ ಸೇಸಪ್ಪ ಎಂಬವರ ಮನೆಗೆ ಸಂಜೆ ಸುಮಾರು ನಾಲ್ಕು ಗಂಟೆ ಸುಮಾರಿಗೆ ಸಿಡಿಲು ಬಡಿದಿದ್ದು ಪರಿಣಾಮ ಗೋಡೆ ಬಿರುಕು ಬಿಟ್ಟು ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಸೇಸಪ್ಪ ಅವರು ಸಂಜೆ ಸುಮಾರು 3.45 ರಿಂದ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು ಈ ವೇಳೆ ಶಾಲೆಯಿಂದ ಮಕ್ಕಳನ್ನು ಕರೆದುಕೊಂಡು ಬರಲು ಹೋಗಿದ್ದು ಮನೆಗೆ ಬಂದು ನೋಡಿದಾಗ ಸಿಡಿಲು ಬಡಿದು ವಿದ್ಯುತ್ ಉಪಕರಣಗಳು ಸಂಪೂರ್ಣ ಸುಟ್ಟು ಕರಕಲಾಗಿದೆಯಲ್ಲದೇ ಗೋಡೆಯಿಂದ ಕಿತ್ತು ಬಂದಿದೆ. ಅಲ್ಲಲ್ಲಿ ಗೋಡೆ ಬಿರುಕು ಬಿಟ್ಟಿದೆ. ಶೌಚಾಲಯದ ಗೋಡೆ ಸಂಪೂರ್ಣ ಹಾನಿಗೊಳಗಾಗಿದೆ. ಅದೃಷ್ಟವಶಾತ್ ಮಕ್ಕಳನ್ನು ಕರೆ ತರಲು ನಾವು ಶಾಲೆಗೆ ಹೋಗಿದ್ದರಿಂದ ಮಕ್ಕಳಿಗೆ ಹಾಗೂ ನಮಗೆ ಏನು ತೊಂದರೆ ಅಗಿಲ್ಲ, ಸಿಡಿಲು ಬಡಿತದಿಂದ ಮನೆಗೆ ಸಂಪೂರ್ಣ ಹಾನಿಯಾಗಿದೆ.

ಈ ಬಗ್ಗೆ ಪಂಚಾಯತ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಅವರು ಸ್ಥಳಕ್ಕೆ ಬಂದು ಪರಿಶೀಲಿಸುವುದಾಗಿ ಹೇಳಿದ್ದಾರೆ ಎಂಬ ಮಾಹಿತಿಯನ್ನು ನೀಡಿದ್ದಾರೆ.

Related posts

ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ

Suddi Udaya

ಉಜಿರೆ ಶ್ರೀ ಧ.ಮಂ. ಪದವಿ ಕಾಲೇಜಿನ ಎಂಟರ್ಪ್ರಿನಾರ್ಶಿಪ್ ಡೆವಲಪ್ಮೆಂಟ್ ಸೆಲ್ಲ್ ವಿಭಾಗದ ವತಿಯಿಂದ ಪ್ರೋಡಕ್ಟ್ ಲಾಂಚ್

Suddi Udaya

ಉಜಿರೆ ಎಸ್.ಡಿ.ಎಂ ರತ್ನಮಾನಸ : ನೂತನ ವಿದ್ಯಾರ್ಥಿಗಳ ಪ್ರವೇಶೋತ್ಸವ ಸಮಾರಂಭ

Suddi Udaya

ಉಜಿರೆ ಶ್ರೀ ಧ. ಮಂ.ಪದವಿ ಪೂರ್ವ ಕಾಲೇಜಿನಲ್ಲಿ “ಭಿತ್ತಿಪತ್ರಿಕೆ ಅನಾವರಣ”

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ “ನಂದಗೋಕುಲ” ಸ್ವ-ಸಹಾಯ ಸಂಘದ ರಚನೆ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾನ್ಸೂನ್ ಡೇ

Suddi Udaya
error: Content is protected !!