July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಪಿಯು ಕಾಲೇಜಿಗೆ ಪಿನಾಕಲ್ ನಲ್ಲಿ ಚಾಂಪಿಯನ್ ಶಿಪ್

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಸೆ.28 ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜು ಉಜಿರೆಯಲ್ಲಿ ನಡೆದ “ಪಿನಾಕಲ್ 2024” ಸ್ಪರ್ಧೆಯಲ್ಲಿ ಪಾಲ್ಗೊಂಡು, ಸಮಗ್ರ ಚಾಂಪಿಯನ್‌ಶಿಪ್‌ ವಿಜೇತರಾಗಿದ್ದಾರೆ.

ಎಕ್ಸೆಲ್ ಪಿಯು ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ ಜೈನ್ ಅವರು, ವಾಣಿಜ್ಯ ವಿದ್ಯಾರ್ಥಿಗಳ ಪ್ರಥಮ ವರ್ಷದ ಮೊದಲ ಪ್ರಯತ್ನದಲ್ಲಿಯೇ ಈ ಅದ್ಭುತ ಸಾಧನೆಗೆ ಅಭಿನಂದನೆ ಸಲ್ಲಿಸಿದರು. ಪ್ರಾಂಶುಪಾಲರಾದ ಡಾ. ನವೀನ್ ಕುಮಾರ ಮರಿಕೆ ಅವರು, ಈ ರೀತಿಯ ಮ್ಯಾನೇಜ್‌ಮೆಂಟ್ ಫೆಸ್ಟ್‌ಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ಅಭಿವೃದ್ಧಿಗೆ ಸಹಕಾರಿ ಎಂದು ತಿಳಿಸಿದರು.

ವಾಣಿಜ್ಯ ವಿಭಾಗದ ಡೀನ್‌ ಸಂತೋಷ್ ಕೆಕೆ , ಹಾಗೂ ವಿಭಾಗ ಮುಖ್ಯಸ್ಥರಾದ ಪ್ರಸನ್ನ ಭೋಜ ಅವರ ಮಾರ್ಗದರ್ಶನದಲ್ಲಿ, ವಾಣಿಜ್ಯ ವಿಭಾಗದ ಉಪನ್ಯಾಸಕರು ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ್ದರು.

“ಪಿನಾಕಲ್ 2024” ಸ್ಪರ್ಧೆಯಲ್ಲಿ ಎಕ್ಸೆಲ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಉಜ್ವಲ ಸಾಧನೆ ಮಾಡಿದ್ದು, ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಪ್ರಥಮ ಹಾಗೂ ದ್ವಿತೀಯ ಸ್ಥಾನಗಳನ್ನು ಪಡೆದಿದ್ದಾರೆ.

ಪ್ರಥಮ ಸ್ಥಾನ ವಿಜೇತರಾದ ವಿಭಾಗಗಳು: ರಸ ಪ್ರಶ್ನೆ ಸ್ಪರ್ಧೆ: ಶ್ರೀವತ್ಸ, ಋತ್ವಿಕ್, ಮಾರ್ಕೆಟಿಂಗ್ ಸ್ಪರ್ಧೆ: ನಂದನ್, ಅಭಿನವ, ಮಾರ್ಕೆಟಿಂಗ್ ಸ್ಪರ್ಧೆ: ಅನಿಶಾ, ಮಿಸ್ಬಾ ಅಂಜುಮ್, ದ್ವಿತೀಯ ಸ್ಥಾನ ವಿಜೇತರಾದ ವಿಭಾಗಗಳು: ಇವೆಂಟ್ ಮ್ಯಾನೇಜ್‌ಮೆಂಟ್: ತನಯ್, ಭವೀಶ್,ನೃತ್ಯ ಸ್ಪರ್ಧೆ:ದಿಯಾ, ವಿದ್ಯಾ ಗೌರಿ, ಅಶಿತಾ, ದರ್ಶಿನಿ.

Related posts

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

Suddi Udaya

ಮಾಲಾಡಿ ಬಿ ಎಂ ಆಟೋ ಚಾಲಕ ಮಾಲಕರ ಸಂಘ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ತೋರಟ್ ವರ್ಗಾವಣೆ: ನೂತನ ಡಿವೈಎಸ್ಪಿ ಆಗಿ ವಿಜಯ ಪ್ರಸಾದ್ ನೇಮಕ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ, ಪ್ರಸಾದ ಸ್ವೀಕಾರ

Suddi Udaya

ಜ.18: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಆ.14: ಕೊಕ್ಕಡದಲ್ಲಿ ಜನಜಾಗೃತಿಗಾಗಿ ಅಖಂಡ ಭಾರತ ಸಂಕಲ್ಪ ದಿನ ಪಂಜಿನ ಮೆರವಣಿಗೆ

Suddi Udaya
error: Content is protected !!