22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮವನ್ನು ಸೆ.30ರಂದು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಸೀನಿಯರ್ ವೆಟರ್ನರಿ ಆಫೀಸರ್ ಡಾ| ಯತೀಶ್ ಕುಮಾರ್ ಎಂ.ಎಸ್.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಪ್ರಾಣಿಗಳ ಬಗ್ಗೆ ಮಾಹಿತಿ ನೀಡಿದರು. ಕಾಡು ಪ್ರಾಣಿಗಳು, ಹಾಗೂ ಸಾಕು ಪ್ರಾಣಿಗಳ ಲಾಲನೆ ಪಾಲನೆ, ಚುಚ್ಚುಮದ್ದು ಇದರ ಬಗ್ಗೆ ವಿವರಿಸಿದರು.

ಮಕ್ಕಳ ಟಾಯ್ ರೂಮನ್ನು ಡೊಮೆಸ್ಟಿಕ್ ಅನಿಮಲ್, ವೈಲ್ಡ್ ಅನಿಮಲ್, ವಾಟರ್ ಅನಿಮಲ್, ಬರ್ಡ್ಸ್ ನಾಲ್ಕು ವಿಭಾಗಗಳಾಗಿ ಮಾಡಿ ಜಂಗಲ್ ಜಂಬೂರಿಯ ರೀತಿಯಲ್ಲಿ ಕಾರ್ಯಕ್ರಮ ಮಾಡಲಾಯಿತು.

ಶಾಲೆಯ ಪ್ರಾಂಶುಪಾಲ ಮನಮೋಹನ್ ನಾಯಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಿಂಡರ್‌ಗಾರ್ಟನ್ ಪ್ರತಿ ವಿಭಾಗದ ವಿಧ್ಯಾರ್ಥಿಗಳಿಂದ ವಿವಿಧ ಪ್ರಾಣಿಗಳ ಛದ್ಮವೇಷ ನಡೆಸಲಾಯಿತು.

ಶಿಕ್ಷಕಿಯರಾದ ಜೀಜಿ ಜೋಸ್, ಮಮತಾ ಶೆಟ್ಟಿ, ಸುದರ್ಶಿನಿ, ವಿಜಯಲಕ್ಷ್ಮಿ ಕಟ್ಟಿ, ದಕ್ಷ ಎಂ., ಶಾಲ್ಮಲಿ ಪ್ರಸಾದ್, ಸಂಧ್ಯಾ ಹೆಗಡೆ, ಉಪಸ್ಥಿತರಿದ್ದರು.

ಶಿಕ್ಷಕಿ ಸ್ಮೃತಿ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಆಟೋ ಚಾಲಕ ಯಶೋಧರ ಗೌಡ ಅಸೌಖ್ಯದಿಂದ ನಿಧನ

Suddi Udaya

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

Suddi Udaya

ಶಿಶಿಲ ಶಿವಕೀರ್ತಿ ನಿಲಯದಲ್ಲಿ ಹನುಮಾನ್ ಜಯಂತಿ ಆಚರಣೆ

Suddi Udaya

ನಡ ನೆಲ್ಲಿಗುಡ್ಡೆ ಅನಾರೋಗ್ಯದಿಂದ ಬಳಲುತ್ತಿರುವ ಶೀನಪ್ಪ ಗೌಡ ಕುಟುಂಬದ ಜೊತೆಗೆ ಹುಟ್ಟುಹಬ್ಬ ಆಚರಿಸಿ ತಾಲೂಕಿಗೆ ಮಾದರಿಯಾದ ನಡ ಪ.ಪೂ. ಕಾಲೇಜು ವಿದ್ಯಾರ್ಥಿ: ಅಕ್ಕಿ, ದವಸಧಾನ್ಯ ವಿತರಣೆ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ವೇಣೂರು: ಖಾಸಗಿ ಬಸ್ ಹಾಗೂ ಜೀಪ್ ನಡುವೆ ಅಪಘಾತ : ಓವ೯ರಿಗೆ ಗಂಭೀರ ಗಾಯ

Suddi Udaya
error: Content is protected !!