July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮ

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್‌ಗಾರ್ಟನ್ ವಿಭಾಗದಲ್ಲಿ “ಜಂಗಲ್ ಜಂಬೂರಿ” ಕಾರ್ಯಕ್ರಮವನ್ನು ಸೆ.30ರಂದು ಆಯೋಜಿಸಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆಯ ಸೀನಿಯರ್ ವೆಟರ್ನರಿ ಆಫೀಸರ್ ಡಾ| ಯತೀಶ್ ಕುಮಾರ್ ಎಂ.ಎಸ್.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಕ್ಕಳಿಗೆ ಪ್ರಾಣಿಗಳ ಬಗ್ಗೆ ಮಾಹಿತಿ ನೀಡಿದರು. ಕಾಡು ಪ್ರಾಣಿಗಳು, ಹಾಗೂ ಸಾಕು ಪ್ರಾಣಿಗಳ ಲಾಲನೆ ಪಾಲನೆ, ಚುಚ್ಚುಮದ್ದು ಇದರ ಬಗ್ಗೆ ವಿವರಿಸಿದರು.

ಮಕ್ಕಳ ಟಾಯ್ ರೂಮನ್ನು ಡೊಮೆಸ್ಟಿಕ್ ಅನಿಮಲ್, ವೈಲ್ಡ್ ಅನಿಮಲ್, ವಾಟರ್ ಅನಿಮಲ್, ಬರ್ಡ್ಸ್ ನಾಲ್ಕು ವಿಭಾಗಗಳಾಗಿ ಮಾಡಿ ಜಂಗಲ್ ಜಂಬೂರಿಯ ರೀತಿಯಲ್ಲಿ ಕಾರ್ಯಕ್ರಮ ಮಾಡಲಾಯಿತು.

ಶಾಲೆಯ ಪ್ರಾಂಶುಪಾಲ ಮನಮೋಹನ್ ನಾಯಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಿಂಡರ್‌ಗಾರ್ಟನ್ ಪ್ರತಿ ವಿಭಾಗದ ವಿಧ್ಯಾರ್ಥಿಗಳಿಂದ ವಿವಿಧ ಪ್ರಾಣಿಗಳ ಛದ್ಮವೇಷ ನಡೆಸಲಾಯಿತು.

ಶಿಕ್ಷಕಿಯರಾದ ಜೀಜಿ ಜೋಸ್, ಮಮತಾ ಶೆಟ್ಟಿ, ಸುದರ್ಶಿನಿ, ವಿಜಯಲಕ್ಷ್ಮಿ ಕಟ್ಟಿ, ದಕ್ಷ ಎಂ., ಶಾಲ್ಮಲಿ ಪ್ರಸಾದ್, ಸಂಧ್ಯಾ ಹೆಗಡೆ, ಉಪಸ್ಥಿತರಿದ್ದರು.

ಶಿಕ್ಷಕಿ ಸ್ಮೃತಿ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

Suddi Udaya

ನಾವೂರು 25ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯಲ್ಲಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!