32.9 C
ಪುತ್ತೂರು, ಬೆಳ್ತಂಗಡಿ
March 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್‌ಡಿಎಂ ಪ.ಪೂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ

ಉಜಿರೆ: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಕಾಲೇಜು ಉಜಿರೆ ಹಾಗೂ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟವು ಇಂದ್ರಪ್ರಸ್ಥ ಸಭಾಂಗಣದಲ್ಲಿ ಸೆ.28ರಂದು ನಡೆಯಿತು.

ಶಿಕ್ಷಣ ಸಂಸ್ಥೆಗಳ ವಸತಿ ನಿಲಯಗಳ ನಿರ್ದೇಶಕರು ಸೋನಿಯಾ ಯಶೋವರ್ಮ ವಿಜೇತರಿಗೆ ಪ್ರಶಸ್ತಿಯನ್ನು ನೀಡಿದರು ಹಾಗೂ ಭಾಗವಸಿದ್ದ ತಂಡದ ಆಟಗಾರರನ್ನು ಉದ್ದೇಶಿಸಿ ಮಾತನಾಡಿ ವಿಜೇತರಿಗೆ ರಾಜ್ಯಮಟ್ಟದಲ್ಲೂ ತಮ್ಮ ದ.ಕ. ಜಿಲ್ಲೆಯನ್ನು ಪ್ರತಿನಿಧಿಸಿ ಪ್ರಶಸ್ತಿಯನ್ನು ಪಡೆದು ರಾಷ್ಟ್ರಮಟ್ಟದಲ್ಲಿ ಮಿಂಚುವಂತೆ ಆಗಲಿ ಎಂದು ಶುಭ ಹಾರೈಸಿದರು.

ಪಂದ್ಯಾಟದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಪ್ರಮೋದ್ ಕುಮಾರ್ ವಹಿಸಿ, ವೈಯಕ್ತಿಕ ವಿಭಾಗದಲ್ಲಿ ಮಿಂಚಿದ ಕ್ರೀಡಾಪಟುಗಳಿಗೆ ಬಹುಮಾನವನ್ನು ನೀಡಿದರು.

ಕಾಲೇಜಿನ ಉಪ ಪ್ರಾಂಶುಪಾಲ ಡಾ| ರಾಜೇಶ್ ಕೆ., ಕಬಡ್ಡಿ ಪಂದ್ಯಾಟದ ಪರಿವೀಕ್ಷಕರಾಗಿ ಆಗಮಿಸಿದ ಬಜಪೆ ಸೈಂಟ್ ಜೋಸೆಫ್ ಪಿಯು ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಅರುಣ್ ಕುಮಾರ್ ಡಿಸೋಜಾ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕಿ ಅಂಕಿತ ಗೌಡ, ಸಂಸ್ಥೆಯ ಕಬ್ಬಡಿ ತರಬೇತುದಾರ ಕೃಷ್ಣಾನಂದ ರಾವ್ ಉಪಸ್ಥಿತರಿದ್ದರು.

ಕನ್ನಡ ಉಪನ್ಯಾಸಕ ಮಹಾವೀರ್ ಜೈನ್ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಸಂದೇಶ ಬಿ. ಪೂಂಜ ವಂದಿಸಿದರು.

ಫಲಿತಾಂಶ:
ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ: ಆಳ್ವಾಸ್ ಕಾಲೇಜು ಮೂಡಬಿದ್ರೆ
ದ್ವಿತೀಯ ಸ್ಥಾನ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜು
ವೈಯಕ್ತಿಕ ವಿಭಾಗದಲ್ಲಿ: ಉತ್ತಮ ದಾಳಿಗಾರ್ತಿ: ಕು. ಬಿಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಉಜಿರೆ, ಉತ್ತಮ ಸವ್ಯಸಾಚಿ: ಪ್ರಾನ್ವಿಕ ಆಳ್ವಾಸ್ ಕಾಲೇಜು ಮೂಡಬಿದ್ರೆ ಹಾಗೂ ಉತ್ತಮ ಹಿಡಿತಗಾರ್ತಿ: ವಂಶಿಕ ಆಳ್ವಾಸ್ ಕಾಲೇಜು ಮೂಡಬಿದ್ರೆ ಇವರು ಪಡೆದುಕೊಂಡಿರುತ್ತಾರೆ.

Related posts

ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ

Suddi Udaya

ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಹೊಸಂಗಡಿ: ಕಾರು ಡಿಕ್ಕಿ-ಬಾಲಕ ಸ್ಥಳದಲ್ಲೇ ಮೃತ್ಯು

Suddi Udaya

ಮದ್ದಡ್ಕ ಎಸ್ ಡಿ ಪಿ ಐ ಸಂಸ್ಥಾಪನ ದಿನಾಚರಣೆ

Suddi Udaya

ಉಜಿರೆಯಲ್ಲಿ ವಿಶ್ವಕರ್ಮ ಬ್ಯಾಂಕ್‌ನಿಂದ ಸ್ವಚ್ಛತಾ ಅಭಿಯಾನ

Suddi Udaya

ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ ಸಭೆ – ಜಾಥಾ ಮತ್ತು ಹಕ್ಕೊತ್ತಾಯ ಮಂಡನೆ

Suddi Udaya
error: Content is protected !!