23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ತೆಂಕಕಾರಂದೂರು ಬ್ರಾಂಚ್ ಸಮಿತಿ ವತಿಯಿಂದ ಕಂಡಡ್ ಒಂಜಿದಿನ ಕ್ರೀಡಾಕೂಟ ಪೆರಾಲ್ದರಕಟ್ಟೆಯಲ್ಲಿ ಸೆ.29ರಂದು ನಡೆಯಿತು.

ಕ್ರೀಡಾಕೂಟದ ಅಧ್ಯಕ್ಷತೆಯನ್ನು ಬ್ರಾಂಚ್ ಅಧ್ಯಕ್ಷ ನವಾಝ್ ಮಂಜೊಟ್ಟಿ ವಹಿಸಿದ್ದರು. ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ಕ್ರೀಡಾಕೂಟದ ಉದ್ಘಾಟನೆಯನ್ನು ನೆರವೇರಿಸಿದರು.

ವಿಭಿನ್ನವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮ ತೆಂಕಕಾರಂದೂರು ಗ್ರಾಮದ ನಾಗರಿಕರಿಗೆ ರಸದೌತಣ ನೀಡುವಲ್ಲಿ ಯಶಸ್ವಿಯಾಯಿತು.

ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ಸದಸ್ಯರಾದ ನವಾಝ್ ಕಟ್ಟೆ ಅವರು ಕ್ರೀಡಾ ಪಟುಗಳನ್ನು ಪ್ರೋತ್ಸಾಹಿಸಲು ಇಂತಹ ಕಾರ್ಯಕ್ರಮದ ಅಗತ್ಯತೆಯನ್ನು ಮನವರಿಕೆ ಮಾಡಿದರು. ಗ್ರಾಮೀಣ ಭಾಗದ ಎಲ್ಲಾ ಯುವಕರು ಕ್ರೀಡೆಗಳಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳುವಂತೆ ಕರೆ ನೀಡಿದರು.

ಊರಿನ ಹಿರಿಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಪುರುಷರು, ಮಕ್ಕಳಿಗೆ ಲಿಂಬೆ ಚಮಚ ಓಟ, ಒಂಟಿ ಕಾಲಿನ ಓಟ, ಹಾಳೆ ಓಟ, ಕೆಸರು ಗದ್ದೆ ಓಟ, ಹಗ್ಗಜಗ್ಗಾಟ ಈ ಮೊದಲಾದ ಗ್ರಾಮೀಣ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ವಯಸ್ಸಿನ ಮಿತಿಯನ್ನು ಲೆಕ್ಕಿಸದೆ ಕ್ರೀಡಾಕೂಟದಲ್ಲಿ ಪಾಲ್ಗೊಂಡ ಹಿರಿಯರು, ಕಿರಿಯರು ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದರು. ವಿಜೇತ ತಂಡಗಳಿಗೆ ಬಹುಮಾನವನ್ನು ವಿತರಿಸಲಾಯಿತು.

ಈ ಕ್ರೀಡಾಕೂಟದ ಮುಖ್ಯ ಅತಿಥಿಗಳಾಗಿ ರಫೀಕ್ ಜಿ. ಎ, ಕಾಸಿಂ ಕಟ್ಟೆ, ಹನೀಫ್ ಪುಂಜಾಲಕಟ್ಟೆ, ಅಬೂಬಕ್ಕರ್ ಮಂಜೊಟ್ಟಿ, ಅಶ್ಫಾಕ್ ಪುಂಜಾಲಕಟ್ಟೆ, ಮುಸ್ತಾಫ ಜಿ. ಕೆರೆ, ಕಮರುದ್ದಿನ್, ರಫೀಕ್ ಕನ್ನಡಿಕಟ್ಟೆ, ರಮೇಶ್ ಗಿಂಡಾಡಿ, ಅಶ್ರಫ್ ಬದ್ಯಾರು, ಶಮೀಮ್ ಕಟ್ಟೆ, ಪದ್ಮನಾಭ ಶೆಟ್ಟಿ, ರಾಮನಂದ ಪೂಜಾರಿ, ಅಶ್ರಫ್ ಕಟ್ಟೆ ಬ್ರಾಂಚ್ ಸಮಿತಿ ಪದಾಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ನಿಜಾಮ್ ಕಟ್ಟೆ ನಿರೂಪಿಸಿದರು.

Related posts

ಉಜಿರೆ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ ; ಸರ್ವಧರ್ಮ ಸಮನ್ವಯ ಸಭೆ

Suddi Udaya

ರಿಕ್ಷಾ ಸ್ಕೂಟಿಗೆ ಡಿಕ್ಕಿ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

Suddi Udaya

ನಮ್ಮ ಟಿವಿಯ ‘ಬಲೆ ಚಾತುರ್ಪು ತೋಜಾಲೆ’ ರೀಯಾಲಿಟಿ ಶೋ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಪವಿತ್ರ ವಾರ ಹಾಗೂ ಈಸ್ಟರ್ ಹಬ್ಬದ ಆಚರಣೆ

Suddi Udaya

ಕಿರಣ್‌ಚಂದ್ರ ಪುಷ್ಪಗಿರಿ ರವರಿಂದ ಡಯಾಲಿಸಿಸ್ ಬಂಧುಗಳಿಗೆ ಅಕ್ಕಿ ಹಾಗೂ ದಿನಸಿ ಸಾಮಾಗ್ರಿ ವಿತರಣೆ

Suddi Udaya
error: Content is protected !!