25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

ವೇಣೂರು: ಕಾರ್ಕಳದ ತಾಲೂಕಿನ ನಲ್ಲೂರು ಪಾದೆಗುಡ್ಡೆ ಬಳಿ ಬೈಕ್‌ನಲ್ಲಿ ಬರುತ್ತಿದ್ದ 5 ಮಂದಿ, ಮಿನಿ ಲಾರಿ ವಾಹನಕ್ಕೆ ಡಿಕ್ಕಿ ಹೊಡೆದು 4 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು (ಸೆ.30) ವರದಿಯಾಗಿದೆ.

ಬೈಕ್‌ನಲ್ಲಿ ಪತಿ, ಪತ್ನಿ ಹಾಗೂ 3 ಮಕ್ಕಳು ಬರುತ್ತಿದ್ದಾಗ ಪಾದೆಗುಡ್ಡೆ ಬಳಿ ಗೂಡ್ಸ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಪತಿ ಮತ್ತು ಮೂವರು ಮಕ್ಕಳು ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ.

ಮೃತರನ್ನು ಸುರೇಶ್‌ ಆಚಾರ್ಯ (36 ವ), ಮಕ್ಕಳಾದ ಸುಮೀಕ್ಷಾ (7 ವ) ಸುಶ್ಮಿತಾ (5 ವ), ಸುಶಾಂತ್‌ (2 ವ) ಎಂದು ಗುರುತಿಸಲಾಗಿದೆ. ಸುರೇಶ್‌ ಆಚಾರ್ಯ ಅವರ ಪತ್ನಿ ಮೀನಾಕ್ಷಿ (32 ವ) ಗಂಭೀರ ಗಾಯಗೊಂಡಿದ್ದು, ಅವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಿಮಣೇಲು ಗಾಂಧಿನಗರ ನಿವಾಸಿ ಸೀತರಾಮ ಆಚಾರ್ಯ ರವರ ಕುಟುಂಬಿಕರು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ.

Related posts

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆ

Suddi Udaya

ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ವರ್ಗಾವಣೆ

Suddi Udaya

ಮಚ್ಚಿನ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಒಕ್ಕೂಟದ ಪದಗ್ರಹಣ ಸಮಾರಂಭಕ್ಕೆ ಡಾ.ಡಿ ವಿರೇಂದ್ರ ಹೆಗ್ಗಡೆಯವರಿಗೆ ಆಮಂತ್ರಣ

Suddi Udaya

ಕಲ್ಮಂಜ: ಓಂಕಾರೇಶ್ವರ ಭಜನಾ ಮಂಡಳಿ ಶ್ರೀ ಕ್ಷೇತ್ರ ಪಜಿರಡ್ಕ ಇದರ ಆಶ್ರಯದಲ್ಲಿ 12ನೇ ವರ್ಷದ ಗೋಕುಲಾಷ್ಟಮಿ

Suddi Udaya

ಅಭಿವೃದ್ಧಿಯ ಹರಿಕಾರ, ಶಾಸಕ ಹರೀಶ್ ಪೂಂಜರವರ ಹುಟ್ಟುಹಬ್ಬ ಪ್ರಯುಕ್ತ ವೇಣೂರು ಕ್ರಿಸ್ತರಾಜ ನವಚೇತನ ವಿಶೇಷ ಶಾಲೆಯ ಮಕ್ಕಳೊಂದಿಗೆ ಹುಟ್ಟುಹಬ್ಬ ಆಚರಿಸಿದ ಹರೀಶ್ ಪೂಂಜ ಅಭಿಮಾನಿ ಬಳಗ

Suddi Udaya

ಕುವೆಟ್ಟು: ಪಯ್ಯೋಟ್ಟು ನಿವಾಸಿ ನಾಣ್ಯಪ್ಪ ಪೂಜಾರಿ ನಿಧನ

Suddi Udaya
error: Content is protected !!