37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಹಾಸಭೆ

ಮುಂಡಾಜೆ ಬಂಟರ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆಯು ಸೆ.29ರಂದು ಯುವಕ ಮಂಡಲ ಮುಂಡಾಜೆ ಇದರ ಸಭಾಭವನದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬೆಳ್ತಂಗಡಿ ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಮಾತನಾಡುತ್ತಾ -ಜಾತಿ ಸಂಘಟನೆಗಳು ಒಟ್ಟಾಗಬೇಕು, ಆ ಮೂಲಕ ಹಿಂದೂ ಧರ್ಮವನ್ನು ಬಡಿದೆಬ್ಬಿಸಿ ನಾವೆಲ್ಲ ಒಂದಾಗಿ ಬದುಕುವುದನ್ನು ಕಲಿಯಬೇಕು -ಎಂಬುದಾಗಿ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟರ ಸಂಘದ ಎಲ್ಲ ಪದಾಧಿಕಾರಿಗಳು ಹಾಗೂ ಮಾಜಿ ಅಧ್ಯಕ್ಷ ಜಯರಾಮ ಶೆಟ್ಟಿ ಮುಂಡಾಡಿಗುತ್ತು ಉಪಸ್ಥಿತರಿದ್ದು, ಸಂಘದ ಚಟುವಟಿಕೆಗಳಿಗೆ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರುಷೋತ್ತಮ ಶೆಟ್ಟಿ ಅಗರಿ ಇವರು ವಹಿಸಿಕೊಂಡಿದ್ದರು.

ಉಜಿರೆ ವಲಯ ಬಂಟರ ಸಂಘದ ಅಧ್ಯಕ್ಷರಾದ ವನಿತಾ ವಿ ರೈ , ಪೂರ್ವ ಅಧ್ಯಕ್ಷರುಗಳು ಹಾಗೂ ಎಲ್ಲಾ ಪದಾಧಿಕಾರಿಗಳು, ಮುಂಡಾಜೆ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮುಂಡಾಜೆ ಗ್ರಾಮ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಶೆಟ್ಟಿ ಅಗರಿ ಇವರು ಪುನರಾಯ್ಕೆಗೊಂಡರು. ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ ನಾಗಂಡ ಮತ್ತು ಕೋಶಾಧಿಕಾರಿಯಾಗಿ ಮಧು ಶೆಟ್ಟಿ ಹುರ್ತಾಜೆ ಮತ್ತು ಇತರ ಪದಾಧಿಕಾರಿಗಳ ಆಯ್ಕೆ ನಡೆಯಿತು.

ವೇದಿಕೆಯಲ್ಲಿ ಸಂಜೀವ ಶೆಟ್ಟಿ ಕುಂಟಿನಿ , ಸುರೇಶ್ ಶೆಟ್ಟಿ ಲಾಯಿಲ, ಉಮೇಶ್ ಶೆಟ್ಟಿ ದುರ್ಗಾ ನಿಲಯ ಉಜಿರೆ, ವೆಂಕಟರಮಣ ಶೆಟ್ಟಿ ಕಲ್ಮಂಜ, ಸೀತಾರಾಮ ಶೆಟ್ಟಿ ಕೆಂಬಾರ್ಜೆ, ಜಯರಾಮ ಶೆಟ್ಟಿ ಕೆಂಬರ್ಜೆ, ಕಿರಣ್ ಕುಮಾರ್ ಶೆಟ್ಟಿ, ರಾಧಾಕೃಷ್ಣ ಶೆಟ್ಟಿ ಕುಂಟಿನಿ, ಗೌರವಾಧ್ಯಕ್ಷರಾದ ರಾಮಣ್ಣ ಶೆಟ್ಟಿ ಅಗರಿ, ಸಂಚಾಲಕ ವಿಶ್ವನಾಥ ಶೆಟ್ಟಿ ಮುಂಡ್ರುಪಾಡಿ ಇವರುಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಕಾರ್ಯದರ್ಶಿ ವಿಜಯಕುಮಾರ್ ರೈ ಸ್ವಾಗತಿಸಿ, ನಾರಾಯಣ ಶೆಟ್ಟಿ ಮಂಜುಶ್ರೀ ನಗರ ಪ್ರಾರ್ಥಿಸಿದರು. ನವೀತ್ ಶೆಟ್ಟಿ ನಿರೂಪಿಸಿ, ಧನ್ಯವಾದಿಸಿದರು. ಮುಂಡಾಜೆ ಗ್ರಾಮ ಸಮಿತಿಯ ಹೆಚ್ಚಿನ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದರು.

Related posts

ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.95.65 ಫಲಿತಾಂಶ

Suddi Udaya

ಖ್ಯಾತ ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿಯವರಿಗೆ ಅಭಿನಂದನ ಸಮಾರಂಭ ಹಾಗೂ ಪುಸ್ತಕ ಬಿಡುಗಡೆ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾಟ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರಾಮಹೋತ್ಸವ: ದೇವರಿಗೆ ಪಂಚಾಮೃತ ಅಭಿಷೇಕ

Suddi Udaya

ಓಡೀಲು: ದಿನಸಿ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಸೇರಿ ಇನ್ನಿತರ ವಸ್ತುಗಳ ಕಳ್ಳತನ

Suddi Udaya

ಬಾಂಗ್ಲಾದೇಶದಲ್ಲಿ ನಡೆದ ಹಿಂದೂ ಯುವಕನ ಹತ್ಯೆ ಖಂಡಿಸಿ ಉಜಿರೆಯಲ್ಲಿ ವಿ.ಹಿಂ.ಪ. ಪ್ರತಿಭಟನೆ

Suddi Udaya
error: Content is protected !!