July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಹಾಸಭೆ

ಮುಂಡಾಜೆ ಬಂಟರ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆಯು ಸೆ.29ರಂದು ಯುವಕ ಮಂಡಲ ಮುಂಡಾಜೆ ಇದರ ಸಭಾಭವನದಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಬೆಳ್ತಂಗಡಿ ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಮಾತನಾಡುತ್ತಾ -ಜಾತಿ ಸಂಘಟನೆಗಳು ಒಟ್ಟಾಗಬೇಕು, ಆ ಮೂಲಕ ಹಿಂದೂ ಧರ್ಮವನ್ನು ಬಡಿದೆಬ್ಬಿಸಿ ನಾವೆಲ್ಲ ಒಂದಾಗಿ ಬದುಕುವುದನ್ನು ಕಲಿಯಬೇಕು -ಎಂಬುದಾಗಿ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಬಂಟರ ಸಂಘದ ಎಲ್ಲ ಪದಾಧಿಕಾರಿಗಳು ಹಾಗೂ ಮಾಜಿ ಅಧ್ಯಕ್ಷ ಜಯರಾಮ ಶೆಟ್ಟಿ ಮುಂಡಾಡಿಗುತ್ತು ಉಪಸ್ಥಿತರಿದ್ದು, ಸಂಘದ ಚಟುವಟಿಕೆಗಳಿಗೆ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುರುಷೋತ್ತಮ ಶೆಟ್ಟಿ ಅಗರಿ ಇವರು ವಹಿಸಿಕೊಂಡಿದ್ದರು.

ಉಜಿರೆ ವಲಯ ಬಂಟರ ಸಂಘದ ಅಧ್ಯಕ್ಷರಾದ ವನಿತಾ ವಿ ರೈ , ಪೂರ್ವ ಅಧ್ಯಕ್ಷರುಗಳು ಹಾಗೂ ಎಲ್ಲಾ ಪದಾಧಿಕಾರಿಗಳು, ಮುಂಡಾಜೆ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮುಂಡಾಜೆ ಗ್ರಾಮ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಶೆಟ್ಟಿ ಅಗರಿ ಇವರು ಪುನರಾಯ್ಕೆಗೊಂಡರು. ಕಾರ್ಯದರ್ಶಿಯಾಗಿ ಪ್ರದೀಪ್ ಶೆಟ್ಟಿ ನಾಗಂಡ ಮತ್ತು ಕೋಶಾಧಿಕಾರಿಯಾಗಿ ಮಧು ಶೆಟ್ಟಿ ಹುರ್ತಾಜೆ ಮತ್ತು ಇತರ ಪದಾಧಿಕಾರಿಗಳ ಆಯ್ಕೆ ನಡೆಯಿತು.

ವೇದಿಕೆಯಲ್ಲಿ ಸಂಜೀವ ಶೆಟ್ಟಿ ಕುಂಟಿನಿ , ಸುರೇಶ್ ಶೆಟ್ಟಿ ಲಾಯಿಲ, ಉಮೇಶ್ ಶೆಟ್ಟಿ ದುರ್ಗಾ ನಿಲಯ ಉಜಿರೆ, ವೆಂಕಟರಮಣ ಶೆಟ್ಟಿ ಕಲ್ಮಂಜ, ಸೀತಾರಾಮ ಶೆಟ್ಟಿ ಕೆಂಬಾರ್ಜೆ, ಜಯರಾಮ ಶೆಟ್ಟಿ ಕೆಂಬರ್ಜೆ, ಕಿರಣ್ ಕುಮಾರ್ ಶೆಟ್ಟಿ, ರಾಧಾಕೃಷ್ಣ ಶೆಟ್ಟಿ ಕುಂಟಿನಿ, ಗೌರವಾಧ್ಯಕ್ಷರಾದ ರಾಮಣ್ಣ ಶೆಟ್ಟಿ ಅಗರಿ, ಸಂಚಾಲಕ ವಿಶ್ವನಾಥ ಶೆಟ್ಟಿ ಮುಂಡ್ರುಪಾಡಿ ಇವರುಗಳು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಕಾರ್ಯದರ್ಶಿ ವಿಜಯಕುಮಾರ್ ರೈ ಸ್ವಾಗತಿಸಿ, ನಾರಾಯಣ ಶೆಟ್ಟಿ ಮಂಜುಶ್ರೀ ನಗರ ಪ್ರಾರ್ಥಿಸಿದರು. ನವೀತ್ ಶೆಟ್ಟಿ ನಿರೂಪಿಸಿ, ಧನ್ಯವಾದಿಸಿದರು. ಮುಂಡಾಜೆ ಗ್ರಾಮ ಸಮಿತಿಯ ಹೆಚ್ಚಿನ ಸದಸ್ಯರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸಿದರು.

Related posts

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

Suddi Udaya

ಅ.2 ರಂದು “ಪುರ್ಸ ಕಟ್ಟುನ ಇನಿ- ಕೋಡೆ – ಎಲ್ಲೆ” ಸಾಕ್ಷ ಚಿತ್ರ ಬಿಡುಗಡೆ

Suddi Udaya

ಪುದುವೆಟ್ಟು ಓಂ ಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉರುವಾಲು: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಅದೃಷ್ಟವಶಾತ್ ಅಪಾಯದಿಂದ ಪಾರಾದ ಮನೆಯವರು

Suddi Udaya

ಧರ್ಮಸ್ಥಳ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಬೆಳ್ಳಿಹಬ್ಬ ಸಂಭ್ರಮ: ರಜತ ಸಂಚಿಕೆ ಲೋಕಾರ್ಪಣೆ – ಸಾಧಕರಿಗೆ ಸನ್ಮಾನ

Suddi Udaya
error: Content is protected !!