September 6, 2026
ಗ್ರಾಮಾಂತರ ಸುದ್ದಿ

ರಕ್ತೇಶ್ವರಿಪದವು ಪೌಷ್ಟಿಕಾಹಾರ ಪೋಷಣ್ ಅಭಿಯಾನ


ರಕ್ತೇಶ್ವರಿ ಪದವು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖ ಹಾಗೂ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ ಮತ್ತು ರಕ್ತೇಶ್ವರಿಪದವು ಅಂಗನವಾಡಿ ಕೇಂದ್ರದ ಜಂಟಿ ಆಶ್ರಯದಲ್ಲಿ ಸೆ.30. ರಂದು ನಡೆಯಿತು.
ಕಣಿಯೂರು ಸರಕಾರಿ ಆಯುಷ್ ಇಲಾಖೆ,ಆಯುರ್ವೇದ ಚಿಕಿತ್ಸಾಲಯ ವೈಧ್ಯಾಧಿಕಾರಿ ಡಾ.ಸಹನಾ ದೀಪ ಬೆಳಗಿಸಿ ಚಾಲನೆ ನೀಡಿದರು.

ಮಹಿಳೆಯರು ಆರೋಗ್ಯವಂತ ಜೀವನವನ್ನು ನಡೆಸಲು ಪೌಷ್ಟಿಕಾಹಾರ ಸೇವನೆಯಿಂದ ಗರ್ಭ ಧರಿಸಿದ ನಂತರ ಹುಟ್ಟಿದ ಮಗು ಸಮಾಜ ಉತ್ತಮ ಆರೋಗ್ಯ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಬೆಳ್ತಂಗಡಿ ಆರೋಗ್ಯ ಇಲಾಖೆ ಕ್ಷೇತ್ರ ಆರೋಗ್ಯ ಅಧಿಕಾರಿ ಶ್ರೀಮತಿ ಅಮ್ಮಿ ಸಿಸ್ಟರ್ ಹೇಳಿದರು.
ಬೆಳ್ತಂಗಡಿ ಸಮುದಾಯ ಆರೋಗ್ಯ ಅಧಿಕಾರಿ ಡಾ.ರೇಷ್ಮಾ,ನಿವೃತ್ತ ಸೈನಿಕ ವಿಕ್ರಂ ಜೆ.ನಿವೃತ್ತ ಸೈನಿಕ ದಿನೇಶ್ ಕುಮಾರ್, ಕೇಳಿಯೇ ಗ್ರಾಮ ಪಂಚಾಯತ್ ಸದಸ್ಯೆ ಮೋಹಿನಿ ನ್ಯಾಯತರ್ಪು ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷ ವಸಂತ ಕುಮಾರ್,ರಕ್ತೇಶ್ವರಿ ಪದವು ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ಅಧ್ಯಕ್ಷ ವಸಂತ ಗೌಡ ಕೆ,ನೇತಾಜಿ ಕ್ರೀಡಾ ಸಂಘದ ಅಧ್ಯಕ್ಷ ಸಿದ್ದಪ್ಪ ಗೌಡ, ಬಾಲ ವಿಕಾಸ ಸಮಿ ಅಧ್ಯಕ್ಷ ಜಯಶ್ರೀ ರಮೇಶ್,ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷೆ ಕವಿತಾ ಶ್ರೀ ,ಆಶಾ ಕಾರ್ಯಕರ್ತೆಯರ ಸ್ಪ್ ಸಲಿಟಿ ಗುಣವತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಎಂ.ಸದಸ್ಯರಾದ ಸುಭಾಷಿಣಿ ಕೆ,ವಿಜಯ ಕುಮಾರ್ ಕೆ, ಮಾಜಿ ಅಧ್ಯಕ್ಷ ತುಕಾರಾಂ ಪೂಜಾರಿ, ಸ್ಥಳೀಯ ಹಿರಿಯರಾದ ಧರ್ಣಪ್ಪ ಗೌಡ, ಜನಾರ್ದನ ಪೂಜಾರಿ, ಆಶಾ ಕಾರ್ಯಕರ್ತೆಯರಾದ ಶಶಿಕಲಾ, ಕೆ,ಪೂರ್ಣಿಮಾ ಕೆ, ಅಂಗನವಾಡಿ ಕಾರ್ಯಕರ್ತರಾದ ನವೀನ ಕುಮಾರಿ,ಶಶಿಕಲಾ ,ಬಾಲವಿಕಾಸ ಸಮಿತಿ ಮಾಜಿ ಅಧ್ಯಕ್ಷರು, ಸದಸ್ಯರು, ಮಕ್ಕಳ ಪೋಷರು ಭಾಗವಹಿಸಿದರು.

ಸನ್ಮಾನ:
ನಿವೃತ್ತ ಸೈನಿಕ ವಿಕ್ರಂ ಜೆ, ಬಾಲ ವಿಕಾಸ ಸಮಿತಿ ಮಾಜಿ ಅಧ್ಯಕ್ಷರಾದ ಪಾವನಗಂಗ ಭಟ್,ಸುರೇಖ ಅವರನ್ನು ಸನ್ಮಾನಿಸಿ ಗೌರವಿಸಿದರು.
ಅಂಗನವಾಡಿ ಕಾರ್ಯಕರ್ತೆ ನಾಗವೇಣಿ ಕೆ.ಎಸ್. ಸ್ವಾಗತಿಸಿ, ವಂದಿಸಿದರು.ಉಮೇಶ್ ಕೇಲ್ದಡ್ಕ ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ಗೋಕರ್ಣದ ಅಶೋಕೆಯಲ್ಲಿ ಚಾತುರ್ಮಾಸ್ಯ ವೃತಾಚರಣೆಯಲ್ಲಿರುವ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಆಟೋ ಚಾಲಕ ಯಶೋಧರ ಗೌಡ ಅಸೌಖ್ಯದಿಂದ ನಿಧನ

Suddi Udaya

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಆರಂಬೋಡಿ: ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ವತಿಯಿಂದ ಉಚಿತ ಸಾಮೂಹಿಕ ಮಕ್ಕಳ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ನ.18: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಲೋಕಸಭಾ ಚುನಾವಣೆಯಲ್ಲಿ ಕೆ. ಆರ್.ಎಸ್. ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದಿಂದ ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಮನವಿ

Suddi Udaya
error: Content is protected !!