ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya

ನೆರಿಯ: ಗಂಡಿಬಾಗಿಲು ಸಂತ ಥೋಮಸ್ ದೇವಾಲಯದಲ್ಲಿ, ಹಿರಿಯ ಸಮಾಜಸೇವಕರಾದ ಮತ್ತು ವಿವಿಧ ಸಂಘ-ಸಂಸ್ಥೆಗಳ ಸದಸ್ಯರಾಗಿರುವ ಚಾಂಡಿ ಅವರನ್ನು, ವೇದಿಕೆಯ ಹಿಂದೆ ಹಲವಾರು ಜನಾನುರಾಗಿ ಕಾರ್ಯಕ್ರಮಗಳ ಮೂಲಕ, ನೆರಿಯ-ಗಂಡಿಬಾಗಿಲು ಪ್ರದೇಶದಲ್ಲಿ ಮನೆ ಮಾತಾಗಿರುವ ಕಾರಣಕ್ಕಾಗಿ, ವಿನ್ಸೆಂಟ್ ಡಿ ಪೌಲ್ ದಿನದಂದು ಸನ್ಮಾನಿಸಲಾಯಿತು.

ಸಮಾಜ ಸೇವೆ ಮತ್ತು ಬಡವರ ಏಳಿಗೆಗಾಗಿ ಅವರು ನೀಡಿದ ಅನೇಕ ಸೇವೆಗಳನ್ನು, ಸ್ಥಳೀಯ ವಿನ್ಸೆಂಟ್ ಸೊಸೈಟಿ, ಬೆಳ್ತಂಗಡಿ ಧರ್ಮಪ್ರಾಂತ್ಯದ ದಕ್ಷಿಣ ಕನ್ನಡ ಗ್ರಾಮೀಣಾಭಿವೃದ್ಧಿ ಸೊಸೈಟಿ (DKRDS), ಮತ್ತು ದೀರ್ಘಾವಧಿ ಕ್ರೆಡಿಟ್ ಯೂನಿಯನ್, ಗಂಡಿಬಾಗಿಲು ಇದರ ಅಧ್ಯಕ್ಷರಾಗಿ, ಚರ್ಚ್ ಪಾಲನಾ ಸಮಿತಿ ಸದಸ್ಯರಾಗಿ, ಟ್ರಸ್ಟಿಯಾಗಿಯೂ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿದ ಕೊಡುಗೆಗಳನ್ನು ಗೌರವಿಸಲಾಯಿತು.

ಚರ್ಚ್ ನ ಧರ್ಮ ಗುರು ವಂ. ಫಾ ಜೋಸ್, ಟ್ರಸ್ಟಿಗಳಾದ ಶಾಜಿ ಮಣ್ಣಿಯೇಕುಂನೆಲ್, ಶಿಜೋ ಕುರಿಯನ್ ಸೇಬಾಸ್ತಿಯನ್ ಎಂ ಜೆ ಮೊದಲಾದವರು ಉಪಸ್ಥಿತರಿದ್ದರು. ಸಂಡೆ ಸ್ಕೂಲ್ ಮುಖ್ಯೋಪಾಧ್ಯಾಯ ಶಿಜು ಸಿ ವಿ ಕಾರ್ಯಕ್ರಮ ನಿರೂಪಿಸಿದರು.

Leave a Comment

error: Content is protected !!