23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

ನೆರಿಯ: ಗಂಡಿಬಾಗಿಲು ಸಂತ ಥೋಮಸ್ ದೇವಾಲಯದಲ್ಲಿ, ಹಿರಿಯ ಸಮಾಜಸೇವಕರಾದ ಮತ್ತು ವಿವಿಧ ಸಂಘ-ಸಂಸ್ಥೆಗಳ ಸದಸ್ಯರಾಗಿರುವ ಚಾಂಡಿ ಅವರನ್ನು, ವೇದಿಕೆಯ ಹಿಂದೆ ಹಲವಾರು ಜನಾನುರಾಗಿ ಕಾರ್ಯಕ್ರಮಗಳ ಮೂಲಕ, ನೆರಿಯ-ಗಂಡಿಬಾಗಿಲು ಪ್ರದೇಶದಲ್ಲಿ ಮನೆ ಮಾತಾಗಿರುವ ಕಾರಣಕ್ಕಾಗಿ, ವಿನ್ಸೆಂಟ್ ಡಿ ಪೌಲ್ ದಿನದಂದು ಸನ್ಮಾನಿಸಲಾಯಿತು.

ಸಮಾಜ ಸೇವೆ ಮತ್ತು ಬಡವರ ಏಳಿಗೆಗಾಗಿ ಅವರು ನೀಡಿದ ಅನೇಕ ಸೇವೆಗಳನ್ನು, ಸ್ಥಳೀಯ ವಿನ್ಸೆಂಟ್ ಸೊಸೈಟಿ, ಬೆಳ್ತಂಗಡಿ ಧರ್ಮಪ್ರಾಂತ್ಯದ ದಕ್ಷಿಣ ಕನ್ನಡ ಗ್ರಾಮೀಣಾಭಿವೃದ್ಧಿ ಸೊಸೈಟಿ (DKRDS), ಮತ್ತು ದೀರ್ಘಾವಧಿ ಕ್ರೆಡಿಟ್ ಯೂನಿಯನ್, ಗಂಡಿಬಾಗಿಲು ಇದರ ಅಧ್ಯಕ್ಷರಾಗಿ, ಚರ್ಚ್ ಪಾಲನಾ ಸಮಿತಿ ಸದಸ್ಯರಾಗಿ, ಟ್ರಸ್ಟಿಯಾಗಿಯೂ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿದ ಕೊಡುಗೆಗಳನ್ನು ಗೌರವಿಸಲಾಯಿತು.

ಚರ್ಚ್ ನ ಧರ್ಮ ಗುರು ವಂ. ಫಾ ಜೋಸ್, ಟ್ರಸ್ಟಿಗಳಾದ ಶಾಜಿ ಮಣ್ಣಿಯೇಕುಂನೆಲ್, ಶಿಜೋ ಕುರಿಯನ್ ಸೇಬಾಸ್ತಿಯನ್ ಎಂ ಜೆ ಮೊದಲಾದವರು ಉಪಸ್ಥಿತರಿದ್ದರು. ಸಂಡೆ ಸ್ಕೂಲ್ ಮುಖ್ಯೋಪಾಧ್ಯಾಯ ಶಿಜು ಸಿ ವಿ ಕಾರ್ಯಕ್ರಮ ನಿರೂಪಿಸಿದರು.

Related posts

ಮಲ್ನಾಡ್ ಐಕಾನ್ ಅಶ್ವತ್ಥ್ ಎಸ್.ಎಲ್. ಅವರಿಗೆ ಒಕ್ಕಲಿಗ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕೊಕ್ಕಡ : ಮುಂಡೂರುಪಳಿಕೆ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ರಕ್ಷಿತ್ ಶಿವರಾಂ ಮನವಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸ್ಪಂದನೆ : ಅರಸಿನಮಕ್ಕಿ ಶಾಲೆಗೆ ಶಿಕ್ಷಕರ ನೇಮಕ

Suddi Udaya

ಜ.24- 30: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರೋಟರಿ ಕ್ಲಬ್ : ನವೀಕೃತ ತಾಲೂಕು ಪಶು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!