July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

ನೆರಿಯ: ಗಂಡಿಬಾಗಿಲು ಸಂತ ಥೋಮಸ್ ದೇವಾಲಯದಲ್ಲಿ, ಹಿರಿಯ ಸಮಾಜಸೇವಕರಾದ ಮತ್ತು ವಿವಿಧ ಸಂಘ-ಸಂಸ್ಥೆಗಳ ಸದಸ್ಯರಾಗಿರುವ ಚಾಂಡಿ ಅವರನ್ನು, ವೇದಿಕೆಯ ಹಿಂದೆ ಹಲವಾರು ಜನಾನುರಾಗಿ ಕಾರ್ಯಕ್ರಮಗಳ ಮೂಲಕ, ನೆರಿಯ-ಗಂಡಿಬಾಗಿಲು ಪ್ರದೇಶದಲ್ಲಿ ಮನೆ ಮಾತಾಗಿರುವ ಕಾರಣಕ್ಕಾಗಿ, ವಿನ್ಸೆಂಟ್ ಡಿ ಪೌಲ್ ದಿನದಂದು ಸನ್ಮಾನಿಸಲಾಯಿತು.

ಸಮಾಜ ಸೇವೆ ಮತ್ತು ಬಡವರ ಏಳಿಗೆಗಾಗಿ ಅವರು ನೀಡಿದ ಅನೇಕ ಸೇವೆಗಳನ್ನು, ಸ್ಥಳೀಯ ವಿನ್ಸೆಂಟ್ ಸೊಸೈಟಿ, ಬೆಳ್ತಂಗಡಿ ಧರ್ಮಪ್ರಾಂತ್ಯದ ದಕ್ಷಿಣ ಕನ್ನಡ ಗ್ರಾಮೀಣಾಭಿವೃದ್ಧಿ ಸೊಸೈಟಿ (DKRDS), ಮತ್ತು ದೀರ್ಘಾವಧಿ ಕ್ರೆಡಿಟ್ ಯೂನಿಯನ್, ಗಂಡಿಬಾಗಿಲು ಇದರ ಅಧ್ಯಕ್ಷರಾಗಿ, ಚರ್ಚ್ ಪಾಲನಾ ಸಮಿತಿ ಸದಸ್ಯರಾಗಿ, ಟ್ರಸ್ಟಿಯಾಗಿಯೂ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಅವರು ಸಲ್ಲಿಸಿದ ಕೊಡುಗೆಗಳನ್ನು ಗೌರವಿಸಲಾಯಿತು.

ಚರ್ಚ್ ನ ಧರ್ಮ ಗುರು ವಂ. ಫಾ ಜೋಸ್, ಟ್ರಸ್ಟಿಗಳಾದ ಶಾಜಿ ಮಣ್ಣಿಯೇಕುಂನೆಲ್, ಶಿಜೋ ಕುರಿಯನ್ ಸೇಬಾಸ್ತಿಯನ್ ಎಂ ಜೆ ಮೊದಲಾದವರು ಉಪಸ್ಥಿತರಿದ್ದರು. ಸಂಡೆ ಸ್ಕೂಲ್ ಮುಖ್ಯೋಪಾಧ್ಯಾಯ ಶಿಜು ಸಿ ವಿ ಕಾರ್ಯಕ್ರಮ ನಿರೂಪಿಸಿದರು.

Related posts

ಮಚ್ಚಿನ: ಬಿಜೆಪಿ ಪಕ್ಷದ ಹಿರಿಯ ಕಾರ್ಯಕರ್ತ ರುಕ್ಮಯ ಗೌಡ ನಿಧನ

Suddi Udaya

ಪಿಯುಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣ, ಸಹನ ಭಟ್ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಜಿ ಕೆ ಜಾಕ್‌ಪಾಟ್ – ಸೀಸನ್ 1ರ ಪ್ರಥಮ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘದ ಚುನಾವಣೆ: ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ಕುತ್ಲೂರಿನ ಸುಂದರಿ ಸೇರಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ

Suddi Udaya

ಗುರುವಾಯನಕೆರೆ: ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಜೊತೆಯಲ್ಲಿದ್ದ ಕಾಶಿಪಟ್ಣದ ಇಬ್ರಾಹಿಂ ಲತೀಫ್ ಬಂಧನ

Suddi Udaya
error: Content is protected !!