25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

ನಾವರ: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ನಾವರ ಗೋಳಿಕಟ್ಟೆ ಇದರ ಪದಾಧಿಕಾರಿಗಳ ಆಯ್ಕೆಯು ಸೆ.29 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.


21 ನೇ ವರ್ಷದ ಶಾರದೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ಕುಲಾಲ್ ದೇವರಗುಡ್ಡೆ ಮತ್ತು ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಹಿಮರಡ್ಡ ಕುದ್ಯಾಡಿ ಇವರನ್ನು ಆಯ್ಕೆ ಮಾಡಲಾಗಿದೆ.


2024 ರ ಶಾರದಾ ಪೂಜಾ ಮಹೋತ್ಸವ ಅ.9 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದ್ದು ಒಂದೇ ದಿನ ಪೂಜಾ ಕೆಲಸಕಾರ್ಯ ನಡೆಯಲಿದೆ.
ಸಂಜೆ ಅಳದಂಗಡಿ ಮಹಾಗಣಪತಿ ದೇವಸ್ಥಾನದ ಬಳಿ ಇರುವ ಫಲ್ಗುಣಿ ನದಿಯಲ್ಲಿ ಶಾರದಾ ದೇವಿ‌ ಮಣ್ಣಿನ ‌ಮೂರ್ತಿಯ ವಿಸರ್ಜನೆ ನಡೆಯಲಿರುವುದು.

ಸಭೆಯಲ್ಲಿ ಪ್ರಧಾನ ಸಂಚಾಲಕರಾದ ವಿಜಯ ಕುಮಾರ್ ಜೈನ್, ಸಂಚಾಲಕರಾದ ರಾಜೂ ಸಾಲ್ಯಾನ್, ವೀರೇಂದ್ರ ಕುಮಾರ್ ರಾಜಪಾದೆ, ರವಿ ಪೂಜಾರಿ ಹಾರಡ್ಡೆ, ನಿತ್ಯಾನಂದ ಯೋಗ ಕ್ಷೇಮ ನಾವರ, ಸದಾನಂದ ಬಿ.ಕುದ್ಯಾಡಿ ಮುಂತಾದವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಸ್ತೃತ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ದೆಹಲಿ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ; ಬೆಳ್ತಂಗಡಿ ಮಂಡಲದ ವತಿಯಿಂದ ವಿಜಯೋತ್ಸವ: ಸಂಸದ ಕ್ಯಾ| ಬ್ರಿಜೇಶ್ ಚೌಟ ಭಾಗಿ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬಂದಾರು : ಕುರಾಯ ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ , ದರ್ಶನ ಬಲಿ , ಬಟ್ಟಲು ಕಾಣಿಕೆ, ಮಹಾಪೂಜೆ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಮೊಟ್ಟೆ ಕೋಳಿ ತರಬೇತಿ ಕಾರ್ಯಾಗಾರ

Suddi Udaya
error: Content is protected !!