September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಂಟರ ಸಂಘದ ಖಾಯಂ ಆಹ್ವಾನಿತರ, ನಿರ್ದೇಶಕ ಮಂಡಳಿ ಸಭೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ಖಾಯಂ ಆಹ್ವಾನಿತರ ಸಭೆಯು ಸೆ.29 ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಜಯಂತ ಶೆಟ್ಟಿ ಮಡಂತ್ಯಾರು ಇವರ ಅದ್ಯಕ್ಷತೆಯಲ್ಲಿ ಜರಗಿತು.

ಉಪಾಧ್ಯಕ್ಷ ಉಮೇಶ್ ಶೆಟ್ಟಿ ಉಜಿರೆ ಸ್ವಾಗತಿಸಿದರು. ಕಾರ್ಯದರ್ಶಿ ಸುರೇಶ್ ಶೆಟ್ಟಿ ವರದಿ ವಾಚಿಸಿ ಸದಸ್ಯತನ ಅರ್ಜಿಗಳ ವಿವರವನ್ನು ಸಭೆಯ ಮುಂದಿಟ್ಟರು. ತೆರಿಗೆ ಪಾವತಿಗೆ ವಿಶೇಷ ಶ್ರಮ ವಹಿಸಿದ ಸಂಘದ ಕೋಶಾಧಿಕಾರಿ ವಸಂತ ಶೆಟ್ಟಿ ಶ್ರದ್ಧಾ ಇವರನ್ನು ಅಭಿನಂದಿಸಲಾಯಿತು. ತೆರಿಗೆ ಪಾವತಿಸಲು ಸಹಕರಿಸಿದ ಪ್ರಶಾಂತ್ ಶೆಟ್ಟಿ ಮಡಂತ್ಯಾರು ಹಾಗೂ ಎಲ್ಲಾ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸಲಾಯಿತು. ಯುವ ವಿಭಾಗಕ್ಕೆ ಆಯ್ಕೆಯಾದ ಪ್ರತೀಕ್ ಶೆಟ್ಟಿ ಮತ್ತು ಮಹಿಳಾ ವಿಭಾಗಕ್ಕೆ ಆಯ್ಕೆಯಾದ ಶ್ರೀಮತಿ ಜಯಲಕ್ಷ್ಮಿ ಸಾಮಾನಿ ಇವರ ತಂಡವನ್ನು ಅಭಿನಂದಿಸಲಾಯಿತು. ಸಂಘಟನಾ ಸಂಚಾಲಕರದ ಸೀತಾರಾಮ ಶೆಟ್ಟಿ ಕೆಂಬರ್ಜೆ ಹಾಗೂ ರಘುರಾಮ ಶೆಟ್ಟಿ ಸಾಧನ ಸಂಘಟನೆ ಹಾಗೂ ನೂತನ ವಲಯವರು ತಂಡ ರಚನೆಯ ಪ್ರಗತಿಯ ಬಗ್ಗೆ ಸಭೆಗೆ ವಿವರ ನೀಡಿದರು.

ಈ ಸಂಧರ್ಭದಲ್ಲಿ ವಿದ್ಯಾರ್ಥಿ ನಿಧಿ ಸಂಚಾಲಕರದ ಅಜಿತ್ ಕುಮಾರ್ ಕೊರ್ಯಾರು ಹಾಗೂ ರಾಧಾಕೃಷ್ಣ ಶೆಟ್ಟಿ ಅಂಬೆಟ್ಟು ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಬಗ್ಗೆ ವಿವರ ನೀಡಿದರು. ಈಗಾಗಲೇ ಆಯ್ಕೆಯಾದ ನೂತನ ವಲಯವಾರು ತಂಡಗಳನ್ನ ಅಭಿನಂದಿಸಲಾಯಿತು. ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಜಯರಾಮ ಶೆಟ್ಟಿ ಮುಂಡಾಡಿಗುತ್ತು, ಉಪಾಧ್ಯಕ್ಷ ನವೀನ್ ಸಾಮಾನಿ ಕರಂಬಾರುಬೀಡು ಉಪಸ್ಥಿತರಿದ್ದರು. ಜತೆಕಾರ್ಯದರ್ಶಿ ಕಿರಣ್ ಶೆಟ್ಟಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಮುಂಡ್ರುಪ್ಪಾಡಿಯಲ್ಲಿ ನಿರ್ಮಾಣಗೊಳ್ಳಲಿರುವ ವಾತ್ಸಲ್ಯ ಮನೆಗೆ ಗುದ್ದಲಿ ಪೂಜೆ

Suddi Udaya

ಮದುವೆ ಸಮಾರಂಭದಲ್ಲಿ ಮೊಳಗಿದ ವಿಷ್ಣು ಸಹಸ್ರನಾಮ

Suddi Udaya

ಕಣಿಯೂರು ಅಕ್ರಮ ಡೀಸೆಲ್ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya
error: Content is protected !!