25.4 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

ಸೂಳಬೆಟ್ಟು: ಯಾವುದೇ ಭಾಷೆಯಲ್ಲಿ ಅದರದೇ ಆದ ಸಂಸ್ಕೃತಿ, ಸೌಂದರ್ಯ ಅಡಕವಾಗಿರುತ್ತದೆ. ನಾವು ಕುಟುಂಬದ ಸದಸ್ಯರೊಂದಿಗೆ ನಮ್ಮದೇ ಮಾತೃ ಭಾಷೆಯಲ್ಲಿ ಯಾವುದೇ ಕಲಬೆರಕೆ ಇಲ್ಲದೆ ಮಾತನಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ಸಾಹಿತಿ ಮೈಸೂರು ಅನಂತ ತಾಮ್ಹನ್ಕಾರ್ ಹೇಳಿದರು.

ಅವರು ಸೆ.30 ರಂದು ಅಳದಂಗಡಿ ಸನಿಹದ ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ನಡೆದ ಅಂತರ್ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ ಮಾಡಿದರು.

ದಿನವೂ ಹೊಸ ಶಬ್ದಾರ್ಥಗಳನ್ನು ಅರಿಯುವುದರ ಜೊತೆಗೆ ಆಗಾಗ ಗದ್ಯ ಪದ್ಯಗಳನ್ನು ಬರೆಯುವ ಅಭ್ಯಾಸವನ್ನಿಟ್ಟುಕೊಂಡರೆ ಸಾಹಿತ್ಯ ಕೃಷಿಯಲ್ಲಿ ನಾವು ಏನನ್ನಾದರೂ ಸಾಧಿಸಬಹುದು ಎಂದು ಅವರು ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ಕವಿಗೋಷ್ಠಿ ನಡೆಸಿ ಸಮುದಾಯದ ಪ್ರತಿಭೆಗಳ ಅನಾವರಣಕ್ಕೆ ಅವಕಾಶ ಕೊಟ್ಟಿರುವುದನ್ನು ಶ್ಲಾಘಿಸಿದರು.


ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ವಹಿಸಿದ್ದರು. ಇದಕ್ಕೂ ಮೊದಲು ಕವಿಯತ್ರಿ ಸಂಧ್ಯಾ ಪಾಳಂದ್ಯೆ ಬೆಳ್ತಂಗಡಿ ಅವರು ಉದ್ಘಾಟಿಸಿದರು. ಗೋಷ್ಠಿಯಲ್ಲಿ 47 ಕವಿಗಳು ಸ್ವರಚಿತ ಕವನಗಳನ್ನು ವಾಚಿಸಿದರು. ಚಂದ್ರಕಾಂತ ಗೋರೆ, ದೀಪಕ ಆಠವಳೆ, ವಿವೇಕ ಕೇಳ್ಕರ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಶಿಕ್ಷಕ-ಪೋಷಕರ ಸಭೆ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ. ಪ್ರಾ. ಶಾಲೆಗೆ ಗಡಿಯಾರ ಕೊಡುಗೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಇಂದಬೆಟ್ಟು: ಭಾರಿ ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿ ಕುಸಿತ, ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!