July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

ಸೂಳಬೆಟ್ಟು: ಯಾವುದೇ ಭಾಷೆಯಲ್ಲಿ ಅದರದೇ ಆದ ಸಂಸ್ಕೃತಿ, ಸೌಂದರ್ಯ ಅಡಕವಾಗಿರುತ್ತದೆ. ನಾವು ಕುಟುಂಬದ ಸದಸ್ಯರೊಂದಿಗೆ ನಮ್ಮದೇ ಮಾತೃ ಭಾಷೆಯಲ್ಲಿ ಯಾವುದೇ ಕಲಬೆರಕೆ ಇಲ್ಲದೆ ಮಾತನಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ಸಾಹಿತಿ ಮೈಸೂರು ಅನಂತ ತಾಮ್ಹನ್ಕಾರ್ ಹೇಳಿದರು.

ಅವರು ಸೆ.30 ರಂದು ಅಳದಂಗಡಿ ಸನಿಹದ ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ನಡೆದ ಅಂತರ್ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ ಮಾಡಿದರು.

ದಿನವೂ ಹೊಸ ಶಬ್ದಾರ್ಥಗಳನ್ನು ಅರಿಯುವುದರ ಜೊತೆಗೆ ಆಗಾಗ ಗದ್ಯ ಪದ್ಯಗಳನ್ನು ಬರೆಯುವ ಅಭ್ಯಾಸವನ್ನಿಟ್ಟುಕೊಂಡರೆ ಸಾಹಿತ್ಯ ಕೃಷಿಯಲ್ಲಿ ನಾವು ಏನನ್ನಾದರೂ ಸಾಧಿಸಬಹುದು ಎಂದು ಅವರು ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ಕವಿಗೋಷ್ಠಿ ನಡೆಸಿ ಸಮುದಾಯದ ಪ್ರತಿಭೆಗಳ ಅನಾವರಣಕ್ಕೆ ಅವಕಾಶ ಕೊಟ್ಟಿರುವುದನ್ನು ಶ್ಲಾಘಿಸಿದರು.


ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ವಹಿಸಿದ್ದರು. ಇದಕ್ಕೂ ಮೊದಲು ಕವಿಯತ್ರಿ ಸಂಧ್ಯಾ ಪಾಳಂದ್ಯೆ ಬೆಳ್ತಂಗಡಿ ಅವರು ಉದ್ಘಾಟಿಸಿದರು. ಗೋಷ್ಠಿಯಲ್ಲಿ 47 ಕವಿಗಳು ಸ್ವರಚಿತ ಕವನಗಳನ್ನು ವಾಚಿಸಿದರು. ಚಂದ್ರಕಾಂತ ಗೋರೆ, ದೀಪಕ ಆಠವಳೆ, ವಿವೇಕ ಕೇಳ್ಕರ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

Suddi Udaya

ಖ್ಯಾತ ಯುರಾಲಜಿಸ್ಟ್‌ ಡಾ. ಸದಾನಂದ ಪೂಜಾರಿಗೆ ಪ್ರೈಡ್ ಆಫ್ ನೇಷನ್ ಅವಾರ್ಡ್ ಪ್ರದಾನ

Suddi Udaya

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

Suddi Udaya

ಕೊಕ್ಕಡ ಜೇಸಿ ಸಾಮಾನ್ಯ ಸಭೆ: ವಲಯ ಕಾರ್ಯಕ್ರಮಕ್ಕೆ ನಿರ್ಧಾರ

Suddi Udaya

ಕಳೆದ ಎರಡೂವರೆ ದಶಕಗಳಿಂದ ಅಮೂಲ್ಯ ಸೇವೆ ಸಲ್ಲಿಸಿದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Suddi Udaya
error: Content is protected !!