30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

ಸೂಳಬೆಟ್ಟು: ಯಾವುದೇ ಭಾಷೆಯಲ್ಲಿ ಅದರದೇ ಆದ ಸಂಸ್ಕೃತಿ, ಸೌಂದರ್ಯ ಅಡಕವಾಗಿರುತ್ತದೆ. ನಾವು ಕುಟುಂಬದ ಸದಸ್ಯರೊಂದಿಗೆ ನಮ್ಮದೇ ಮಾತೃ ಭಾಷೆಯಲ್ಲಿ ಯಾವುದೇ ಕಲಬೆರಕೆ ಇಲ್ಲದೆ ಮಾತನಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ಸಾಹಿತಿ ಮೈಸೂರು ಅನಂತ ತಾಮ್ಹನ್ಕಾರ್ ಹೇಳಿದರು.

ಅವರು ಸೆ.30 ರಂದು ಅಳದಂಗಡಿ ಸನಿಹದ ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ನಡೆದ ಅಂತರ್ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ ಮಾಡಿದರು.

ದಿನವೂ ಹೊಸ ಶಬ್ದಾರ್ಥಗಳನ್ನು ಅರಿಯುವುದರ ಜೊತೆಗೆ ಆಗಾಗ ಗದ್ಯ ಪದ್ಯಗಳನ್ನು ಬರೆಯುವ ಅಭ್ಯಾಸವನ್ನಿಟ್ಟುಕೊಂಡರೆ ಸಾಹಿತ್ಯ ಕೃಷಿಯಲ್ಲಿ ನಾವು ಏನನ್ನಾದರೂ ಸಾಧಿಸಬಹುದು ಎಂದು ಅವರು ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ಕವಿಗೋಷ್ಠಿ ನಡೆಸಿ ಸಮುದಾಯದ ಪ್ರತಿಭೆಗಳ ಅನಾವರಣಕ್ಕೆ ಅವಕಾಶ ಕೊಟ್ಟಿರುವುದನ್ನು ಶ್ಲಾಘಿಸಿದರು.


ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ವಹಿಸಿದ್ದರು. ಇದಕ್ಕೂ ಮೊದಲು ಕವಿಯತ್ರಿ ಸಂಧ್ಯಾ ಪಾಳಂದ್ಯೆ ಬೆಳ್ತಂಗಡಿ ಅವರು ಉದ್ಘಾಟಿಸಿದರು. ಗೋಷ್ಠಿಯಲ್ಲಿ 47 ಕವಿಗಳು ಸ್ವರಚಿತ ಕವನಗಳನ್ನು ವಾಚಿಸಿದರು. ಚಂದ್ರಕಾಂತ ಗೋರೆ, ದೀಪಕ ಆಠವಳೆ, ವಿವೇಕ ಕೇಳ್ಕರ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಮರೋಡಿ: ಅರುಣೋದಯ ಯುವಕ ಮಂಡಲದಿಂದ ‘ಆಟಿದ ತಿನಸ್ ಬಂಜರ ವನಸ್’ ಕಾರ್ಯಕ್ರಮ

Suddi Udaya

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕಳಿಯ ಗ್ರಾಮ ಪಂಚಾಯತ್ ನ ಮಾಸಿಕ ಸಾಮಾನ್ಯ ಸಭೆ

Suddi Udaya

ಕರಾವಳಿ ಪ್ರವಾಸೋದ್ಯಮ ಕುರಿತು ವಿಧಾನಸಭಾ ಕಲಾಪದಲ್ಲಿ ಧ್ವನಿ ಎತ್ತಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

Suddi Udaya

ವಾಣಿ ಆಂ.ಮಾ. ಶಾಲಾ ವಿದ್ಯಾರ್ಥಿ ಶಮಾಳಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಪುರಸ್ಕಾರ ಪ್ರಶಸ್ತಿ

Suddi Udaya

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya
error: Content is protected !!