September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ ಗ್ರಾ.ಪಂ. ವ್ಯಾಪ್ತಿಯಲ್ಲಿ ಪಂಚಾಯತ್ ಅನುದಾನದಿಂದ ಅಳವಡಿಸಿದ ಸೋಲಾರ್ ಲೈಟ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ : ಕಳೆಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂಚಾಯತ್ ವತಿಯಿಂದ ಅಳವಡಿಸಿದ ಸೋಲಾರ್ ಲೈಟ್ ಕಳವಾಗಿರುವ ಘಟನೆ ಸೆ.30 ರಂದು ನಡೆದಿದೆ,.

2021-22 ಸಾಲಿನ 15ನೇ ಹಣಕಾಸು ಯೋಜನೆಯಲ್ಲಿ ಅಳವಡಿಸಿದ ಸೋಲಾರ್ ಲೈಟ್ ಕಳವು ಆಗಿದ್ದು , ಕಳೆಂಜ ಗ್ರಾಮದ ಕುಂಟ್ಯಾನ್ ಎಂಬಲ್ಲಿಯ ಸುಲೈಮಾನ್ ಅವರ ಮನೆ ಹತ್ತಿರ ರೂ.25000/- ಮೌಲ್ಯದ ಸೋಲಾರ್ ಲೈಟ್, ಕಟ್ಲಾಜೆ ಎಂಬಲ್ಲಿಯ ಜಯರಾಜ್ ಎಂಬವರ ಮನೆ ಹತ್ತಿರ ರೂ.25000 ಮೌಲ್ಯದ ಸೋಲಾರ್ ಲೈಟ್ , ನಿಡ್ಡಾಜೆ ಕ್ರಾಸ್ ಬಳಿ ರೂ.25000 ಮೌಲ್ಯದ ಸೋಲಾರ್ ಲೈಟ್ ಕಳವಾಗಿರುತ್ತದೆ.

ಸದ್ರಿ ಸ್ಥಳಗಳಲ್ಲಿ ಅಳವಡಿಸಿದ ಸೋಲಾರ್ ಲೈಟ್ ಕಳವು ಆಗಿರುವ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಬಿ.ಸಿ ರೋಡ್ ಯುವತಿಯ ಹತ್ಯೆ ಪ್ರಕರಣ: ಆರೋಪಿಯ ಫೋಟೋ ತಿರುಚಿ ಬಜರಂಗದಳದ ವಿರುದ್ಧ ಅಪಪ್ರಚಾರ; ಪ್ರಕರಣ ದಾಖಲು

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಹರೀಶ್ ಪೂಂಜ ನೇತೃತ್ವದಲ್ಲಿ ವರ್ತಕರ ಸಂಘದ ಬೇಡಿಕೆಯ ಮೇರೆಗೆ ಹೆದ್ದಾರಿಯ ಅಧಿಕಾರಿಗಳ, ಜನಸಂಪರ್ಕ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

Suddi Udaya

ಬೆಳ್ತಂಗಡಿ : ಸಂತೆಕಟ್ಟೆ ಬಳಿ ಖಾಸಗಿ ಬಸ್ಸು ಹಾಗೂ ಟ್ಯಾಂಕರ್ ನಡುವೆ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರು

Suddi Udaya
error: Content is protected !!