September 6, 2026
Uncategorized

ಕೊಕ್ಕಡ:ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ

ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿ ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ ಅ.1ರಂದು ಸಂಜೆ ನಡೆದ ಬಗ್ಗೆ ವರದಿಯಾಗಿದೆ.

ಮಲ್ಲಿಗೆಮಜಲು ನಿವಾಸಿ ಅಬ್ದುಲ್ ಹಮೀದ್ ಎಂಬವರ 10ವರ್ಷ ಪ್ರಾಯದ ಪುತ್ರ, ಆತೂರಿನ ಆಯಿಷಾ ಸ್ಕೂಲ್ ನ 4ನೇ ತರಗತಿಯ ವಿಧ್ಯಾರ್ಥಿ ನವಾಫ್ ಇಸ್ಮಾಯಿಲ್ ಮೃತಪಟ್ಟವರು.

ಮನೆಯ ಮಹಿಳೆಯೊಬ್ಬರು ಅಂಗಳದಲ್ಲೇ ಕಾರು ಹಿಂದಕ್ಕೆ ತೆಗೆಯುವ ಸಂದರ್ಭ ಆಕಸ್ಮಿಕವಾಗಿ ಮುಂದಕ್ಕೆ ಚಲಾಯಿಸಿ ಡಿಕ್ಕಿ ಹೊಡೆದಿದೆ. ಶಾಲೆ ಬಿಟ್ಟು ಆಗಷ್ಟೇ ಮನೆಗೆ ಬಂದಿದ್ದ ಬಾಲಕ ನವಾಫ್ ಕಾರಿನಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಾಗಲೇ ಬಾಲಕ ಮೃತಪಟ್ಟಿದ್ದಾನೆ. ಆತೂರಿನ ಆಯಿಷಾ ಸ್ಕೂಲ್ ನ 4ನೇ ತರಗತಿಯ ವಿಧ್ಯಾರ್ಥಿ ನವಾಫ್ ಇಸ್ಮಾಯಿಲ್ ಕಾರಿನ ಹಿಂಬದಿ ನಿಂತಿದ್ದದ್ದು ಅರಿವಿಗೆ ಬಾರದೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರ ಕೊಠಡಿಯಲ್ಲಿರಿಸಲಾಗಿದೆ. ಘಟನೆ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಪ್ರಕರಣಕ್ಕೆ ತಿರುವು ಪಡೆದ ಮತ್ತೊಂದು ಪ್ರಕರಣ

Suddi Udaya

ಮೇ 15: ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿದೈವಸ್ಥಾನದಲ್ಲಿ ಸಂಕ್ರಮಣ ಪೂಜೆ : ಉಚಿತ ಬರೆಯುವ ಪುಸ್ತಕ ವಿತರಣೆಯ ಅರ್ಜಿ ಫಾರ್ಮ್‌ಗಳ ವಿತರಣೆ

Suddi Udaya

ಗುರುವಾಯನಕೆರೆ 30 ನೇ ವರ್ಷದ ಸಾರ್ವಜನಿಕ‌ ಶ್ರೀ ಗಣೇಶೋತ್ಸವ: ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಗಣಪತಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ರೋಟರಿ ಕ್ಲಬ್ ವತಿಯಿಂದ ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಗೆ ಟೇಬಲ್ ಮತ್ತು ಚೇರ್ ವಿತರಣೆ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬ ಆಚರಣೆ

Suddi Udaya

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!