23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕೊಕ್ಕಡ:ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ

ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ಎಂಬಲ್ಲಿ ಮನೆಯೊಂದರ ಅಂಗಳದಲ್ಲಿ ಕಾರೊಂದನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕನೋರ್ವ ಕಾರಿನಡಿಗೆ ಬಿದ್ದು ಮೃತಪಟ್ಟ ಘಟನೆ ಅ.1ರಂದು ಸಂಜೆ ನಡೆದ ಬಗ್ಗೆ ವರದಿಯಾಗಿದೆ.

ಮಲ್ಲಿಗೆಮಜಲು ನಿವಾಸಿ ಅಬ್ದುಲ್ ಹಮೀದ್ ಎಂಬವರ 10ವರ್ಷ ಪ್ರಾಯದ ಪುತ್ರ, ಆತೂರಿನ ಆಯಿಷಾ ಸ್ಕೂಲ್ ನ 4ನೇ ತರಗತಿಯ ವಿಧ್ಯಾರ್ಥಿ ನವಾಫ್ ಇಸ್ಮಾಯಿಲ್ ಮೃತಪಟ್ಟವರು.

ಮನೆಯ ಮಹಿಳೆಯೊಬ್ಬರು ಅಂಗಳದಲ್ಲೇ ಕಾರು ಹಿಂದಕ್ಕೆ ತೆಗೆಯುವ ಸಂದರ್ಭ ಆಕಸ್ಮಿಕವಾಗಿ ಮುಂದಕ್ಕೆ ಚಲಾಯಿಸಿ ಡಿಕ್ಕಿ ಹೊಡೆದಿದೆ. ಶಾಲೆ ಬಿಟ್ಟು ಆಗಷ್ಟೇ ಮನೆಗೆ ಬಂದಿದ್ದ ಬಾಲಕ ನವಾಫ್ ಕಾರಿನಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಅಷ್ಟರಲ್ಲಾಗಲೇ ಬಾಲಕ ಮೃತಪಟ್ಟಿದ್ದಾನೆ. ಆತೂರಿನ ಆಯಿಷಾ ಸ್ಕೂಲ್ ನ 4ನೇ ತರಗತಿಯ ವಿಧ್ಯಾರ್ಥಿ ನವಾಫ್ ಇಸ್ಮಾಯಿಲ್ ಕಾರಿನ ಹಿಂಬದಿ ನಿಂತಿದ್ದದ್ದು ಅರಿವಿಗೆ ಬಾರದೆ ಈ ದುರ್ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮೃತ ದೇಹವನ್ನು ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರ ಕೊಠಡಿಯಲ್ಲಿರಿಸಲಾಗಿದೆ. ಘಟನೆ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ರವರ ಪರವಾಗಿ ಬೆಳ್ತಂಗಡಿ ಮಂಡಲದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತ ಪ್ರಚಾರ

Suddi Udaya

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya

ಸೆ .13: ಶ್ರವಣಬೆಳಗೊಳದ ಮಹಾಸ್ವಾಮೀಜಿ ಬೆಳ್ತಂಗಡಿ ಪುರ ಪ್ರವೇಶ

Suddi Udaya

ಅ.4-5: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಶ್ರವಣ ಮತ್ತು ಮಾತು ಪರಿಶೀಲನಾ ಶಿಬಿರ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಹೊಸ್ಮರ್ ವಲಯದ ಈದು ಒಕ್ಕೂಟದ ಶ್ರೀ ರಾಜಶ್ರೀ ಸ್ವಸಹಾಯ ಸಂಘದ 20 ನೇ ವರ್ಷದ ಸಂಭ್ರಮಾಚಾರಣೆ

Suddi Udaya
error: Content is protected !!