37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ

ಕೊಕ್ಕಡ: ಹಿಂದೂ ಜಾಗರಣ ವೇದಿಕೆ ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕ ಇದರ ಆಶ್ರಯದಲ್ಲಿ 8ನೇ ವರುಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಹಾಗೂ ಮೊಸರು ಕುಡಿಕೆ ಉತ್ಸವ ಸೆ.29 ರಂದು ಹಳ್ಳಿಂಗೇರಿಯ ಶ್ರೀಅಯ್ಯಪ್ಪ ಸ್ವಾಮಿ ಮಂದಿರದ ವಠಾರದಲ್ಲಿ ನಡೆಯಿತು.


ಹಳ್ಳಿಂಗೇರಿ ಶ್ರೀಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷ ಕೆ.ವಿ.ಭಟ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಸಿ ಡಿ ಸಿ ಸಿ ಬ್ಯಾಂಕಿನ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ ವಹಿಸಿದ್ದರು. ಪುತ್ತೂರು ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಪುತ್ತೂರು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಕೊಕ್ಕಡ ವೈದ್ಯನಾಥೇಶ್ಬರ ವಿಷ್ಣು ಮೂರ್ತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ವೇ|ಮೂ| ಬಾಲಕೃಷ್ಣ ಕೆದಿಲಾಯ, ಕೊಕ್ಕಡ ಶ್ರೀರಾಮ ಸೇವಾ ಟ್ರಸ್ಟ್ ಅಧ್ಯಕ್ಷ ಬಾಲಕೃಷ್ಣ ನೈಮಿಷ, ಹಳ್ಳಿಂಗೇರಿ ಅಯ್ಯಪ್ಪ ಭಜನಾ ಮಂದಿರದ ಅಧ್ಯಕ್ಷ ವಿಶ್ವನಾಥ ಕೊಡಿಂಗೇರಿ, ಉದ್ಯಮಿ ಗಣೇಶ್ ಗೌಡ ಕಲಾಯಿ, ಸಮಿತಿಯ ಅಧ್ಯಕ್ಷ ಕಿಶೋರ್ ಪೂಜಾರಿ ಪೊಯ್ಯೋಳೆ, ಕಾರ್ಯದರ್ಶಿ ಶರತ್ ಹಳ್ಳಿಂಗೇರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಶಿಕ್ಷಕ ದಾಮೋದರ ಅಜ್ಜಾವರ ಸ್ವಾಗತಿಸಿದರು. ಸಚಿನ್ ಬಜ ವಂದಿಸಿದರು. ಕೇಶವ ಹಳ್ಳಿಗೇರಿ ನಿರೂಪಿಸಿದರು.
ಸಾರ್ವಜನಿಕರಿಗೂ ಹಾಗೂ ಮಕ್ಕಳಿಗೆ ವಿವಿಧ ರೀತಿಯ ಆಟೋಟ ಸ್ಪರ್ಧೆಯನ್ನು ನಡೆಸಲಾಯಿತು. ಅಂತರ್ ರಾಜ್ಯ ನಿರೂಪಕ ಸುರೇಶ್ ಪಡಿಪಂಡ ಹಾಗೂ ದೀಪಕ್ ನೆಲ್ಯಾಡಿ ಪಂದ್ಯಾಟವನ್ನು ನಡೆಸಿಕೊಟ್ಟರು. ಹಿಂದೂ ಜಾಗರಣ ವೇದಿಕೆ ಶಿವಾಜಿ ಗ್ರೂಪ್ ಆಫ್ ಬಾಯ್ಸ್ ಕೊಕ್ಕಡ ಘಟಕದ ಪದಾಧಿಕಾರಿಗಳು, ಸದಸ್ಯರು ಹಾಗೂ ಸ್ಥಳೀಯ ಸಂಘ ಸಂಸ್ಥೆಯವರು ಸಹಕರಿಸಿದರು.

Related posts

ಲಾಯಿಲ ರಾಘವೇಂದ್ರ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭೇಟಿ

Suddi Udaya

ಕೊಯ್ಯೂರು: ಸ.ಪ್ರೌ. ಶಾಲೆಯಲ್ಲಿ ಶಾಲಾ ಪಾರ್ಲಿಮೆಂಟ್ ಉದ್ಘಾಟನೆ

Suddi Udaya

ಮಚ್ಚಿನ ಮೂಲ್ಯರ ಯಾನೆ ಕುಂಬಾರರ ಮಹಿಳಾ ಸಂಘದಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ: ‘ಶ್ರೀರಾಮದರ್ಶನ’ ಯಕ್ಷಗಾನ ತಾಳಮದ್ದಳೆ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ – 2024

Suddi Udaya

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶಿಶಿಲ: ಗುಂಡಿಗಾಡು ನಿವಾಸಿ ದೇಜಮ್ಮ ನಿಧನ

Suddi Udaya
error: Content is protected !!