April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

ನಾವರ: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ನಾವರ ಗೋಳಿಕಟ್ಟೆ ಇದರ ಪದಾಧಿಕಾರಿಗಳ ಆಯ್ಕೆಯು ಸೆ.29 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.


21 ನೇ ವರ್ಷದ ಶಾರದೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ಕುಲಾಲ್ ದೇವರಗುಡ್ಡೆ ಮತ್ತು ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಹಿಮರಡ್ಡ ಕುದ್ಯಾಡಿ ಇವರನ್ನು ಆಯ್ಕೆ ಮಾಡಲಾಗಿದೆ.


2024 ರ ಶಾರದಾ ಪೂಜಾ ಮಹೋತ್ಸವ ಅ.9 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದ್ದು ಒಂದೇ ದಿನ ಪೂಜಾ ಕೆಲಸಕಾರ್ಯ ನಡೆಯಲಿದೆ.
ಸಂಜೆ ಅಳದಂಗಡಿ ಮಹಾಗಣಪತಿ ದೇವಸ್ಥಾನದ ಬಳಿ ಇರುವ ಫಲ್ಗುಣಿ ನದಿಯಲ್ಲಿ ಶಾರದಾ ದೇವಿ‌ ಮಣ್ಣಿನ ‌ಮೂರ್ತಿಯ ವಿಸರ್ಜನೆ ನಡೆಯಲಿರುವುದು.

ಸಭೆಯಲ್ಲಿ ಪ್ರಧಾನ ಸಂಚಾಲಕರಾದ ವಿಜಯ ಕುಮಾರ್ ಜೈನ್, ಸಂಚಾಲಕರಾದ ರಾಜೂ ಸಾಲ್ಯಾನ್, ವೀರೇಂದ್ರ ಕುಮಾರ್ ರಾಜಪಾದೆ, ರವಿ ಪೂಜಾರಿ ಹಾರಡ್ಡೆ, ನಿತ್ಯಾನಂದ ಯೋಗ ಕ್ಷೇಮ ನಾವರ, ಸದಾನಂದ ಬಿ.ಕುದ್ಯಾಡಿ ಮುಂತಾದವರು ಉಪಸ್ಥಿತರಿದ್ದರು.

Related posts

ಉಜಿರೆಯಿಂದ ಧರ್ಮಸ್ಥಳಕ್ಕೆ ಧರ್ಮಸಂರಕ್ಷಣ ಪಾದಯಾತ್ರೆ: 1,46,000 ಭಕ್ತಾದಿಗಳು ಧರ್ಮಸಂರಕ್ಷಣೆ ಯಾತ್ರೆಯ ದಿನ ಅನ್ನಪ್ರಸಾದ ಸ್ವೀಕರಿಸಿರುವುದು ವಿಶೇಷ: ಶಶಿಧರ ಶೆಟ್ಟಿ, ನವಶಕ್ತಿ

Suddi Udaya

ಮಚ್ಚಿನ: ಅನುಮತಿ ಇಲ್ಲದೆ ಮರ ಕಡಿದು ಮೂರು ವಿದ್ಯುತ್ ಕಂಬಕ್ಕೆ ಹಾನಿ; ಮೆಸ್ಕಾಂ ಸಹಾಯವಾಣಿಗೆ ದೂರು ನೀಡಿದ್ದಕ್ಕೆ ದಂಪತಿಗಳಿಗೆ ಹಲ್ಲೆ

Suddi Udaya

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಎಲ್ ಕೆ ಜಿ ಮತ್ತು ಯುಕೆಜಿ ಮಕ್ಕಳ ರೆಡ್ ಕಲರ್ ಸಂಭ್ರಮ

Suddi Udaya

ಇಂದಬೆಟ್ಟು ಆರೋಗ್ಯ ಕೇಂದ್ರದಲ್ಲೊಂದು ಅಚ್ಚರಿ; ಆಸ್ಪತ್ರೆ ಬಾಗಿಲು ಹಾಕದೆ ಹೋದ ಸಿಬ್ಬಂದಿಗಳು

Suddi Udaya
error: Content is protected !!