30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಂಟರ ಸಂಘದ ಖಾಯಂ ಆಹ್ವಾನಿತರ, ನಿರ್ದೇಶಕ ಮಂಡಳಿ ಸಭೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ಖಾಯಂ ಆಹ್ವಾನಿತರ ಸಭೆಯು ಸೆ.29 ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಜಯಂತ ಶೆಟ್ಟಿ ಮಡಂತ್ಯಾರು ಇವರ ಅದ್ಯಕ್ಷತೆಯಲ್ಲಿ ಜರಗಿತು.

ಉಪಾಧ್ಯಕ್ಷ ಉಮೇಶ್ ಶೆಟ್ಟಿ ಉಜಿರೆ ಸ್ವಾಗತಿಸಿದರು. ಕಾರ್ಯದರ್ಶಿ ಸುರೇಶ್ ಶೆಟ್ಟಿ ವರದಿ ವಾಚಿಸಿ ಸದಸ್ಯತನ ಅರ್ಜಿಗಳ ವಿವರವನ್ನು ಸಭೆಯ ಮುಂದಿಟ್ಟರು. ತೆರಿಗೆ ಪಾವತಿಗೆ ವಿಶೇಷ ಶ್ರಮ ವಹಿಸಿದ ಸಂಘದ ಕೋಶಾಧಿಕಾರಿ ವಸಂತ ಶೆಟ್ಟಿ ಶ್ರದ್ಧಾ ಇವರನ್ನು ಅಭಿನಂದಿಸಲಾಯಿತು. ತೆರಿಗೆ ಪಾವತಿಸಲು ಸಹಕರಿಸಿದ ಪ್ರಶಾಂತ್ ಶೆಟ್ಟಿ ಮಡಂತ್ಯಾರು ಹಾಗೂ ಎಲ್ಲಾ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸಲಾಯಿತು. ಯುವ ವಿಭಾಗಕ್ಕೆ ಆಯ್ಕೆಯಾದ ಪ್ರತೀಕ್ ಶೆಟ್ಟಿ ಮತ್ತು ಮಹಿಳಾ ವಿಭಾಗಕ್ಕೆ ಆಯ್ಕೆಯಾದ ಶ್ರೀಮತಿ ಜಯಲಕ್ಷ್ಮಿ ಸಾಮಾನಿ ಇವರ ತಂಡವನ್ನು ಅಭಿನಂದಿಸಲಾಯಿತು. ಸಂಘಟನಾ ಸಂಚಾಲಕರದ ಸೀತಾರಾಮ ಶೆಟ್ಟಿ ಕೆಂಬರ್ಜೆ ಹಾಗೂ ರಘುರಾಮ ಶೆಟ್ಟಿ ಸಾಧನ ಸಂಘಟನೆ ಹಾಗೂ ನೂತನ ವಲಯವರು ತಂಡ ರಚನೆಯ ಪ್ರಗತಿಯ ಬಗ್ಗೆ ಸಭೆಗೆ ವಿವರ ನೀಡಿದರು.

ಈ ಸಂಧರ್ಭದಲ್ಲಿ ವಿದ್ಯಾರ್ಥಿ ನಿಧಿ ಸಂಚಾಲಕರದ ಅಜಿತ್ ಕುಮಾರ್ ಕೊರ್ಯಾರು ಹಾಗೂ ರಾಧಾಕೃಷ್ಣ ಶೆಟ್ಟಿ ಅಂಬೆಟ್ಟು ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಬಗ್ಗೆ ವಿವರ ನೀಡಿದರು. ಈಗಾಗಲೇ ಆಯ್ಕೆಯಾದ ನೂತನ ವಲಯವಾರು ತಂಡಗಳನ್ನ ಅಭಿನಂದಿಸಲಾಯಿತು. ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಜಯರಾಮ ಶೆಟ್ಟಿ ಮುಂಡಾಡಿಗುತ್ತು, ಉಪಾಧ್ಯಕ್ಷ ನವೀನ್ ಸಾಮಾನಿ ಕರಂಬಾರುಬೀಡು ಉಪಸ್ಥಿತರಿದ್ದರು. ಜತೆಕಾರ್ಯದರ್ಶಿ ಕಿರಣ್ ಶೆಟ್ಟಿ ಧನ್ಯವಾದವಿತ್ತರು.

Related posts

ಅರಸಿನಮಕ್ಕಿ: ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಕಾಳಿ ರವರಿಗೆ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ಕಿಂಗ್ ತಾಟೆ ಕೋಣಕ್ಕೆ ಸನ್ಮಾನ ಹಾಗೂ ಅಸಕ್ತರಿಗೆ ಅಕ್ಕಿ, ಧನಸಹಾಯ ವಿತರಣೆ

Suddi Udaya

ಮಡಂತ್ಯಾರು: ಪಾರೆಂಕಿ ನಿವಾಸಿ ಸಾಂತಪ್ಪ ಗೌಡ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ

Suddi Udaya
error: Content is protected !!