22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಂಟರ ಸಂಘದ ಖಾಯಂ ಆಹ್ವಾನಿತರ, ನಿರ್ದೇಶಕ ಮಂಡಳಿ ಸಭೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ಖಾಯಂ ಆಹ್ವಾನಿತರ ಸಭೆಯು ಸೆ.29 ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಜಯಂತ ಶೆಟ್ಟಿ ಮಡಂತ್ಯಾರು ಇವರ ಅದ್ಯಕ್ಷತೆಯಲ್ಲಿ ಜರಗಿತು.

ಉಪಾಧ್ಯಕ್ಷ ಉಮೇಶ್ ಶೆಟ್ಟಿ ಉಜಿರೆ ಸ್ವಾಗತಿಸಿದರು. ಕಾರ್ಯದರ್ಶಿ ಸುರೇಶ್ ಶೆಟ್ಟಿ ವರದಿ ವಾಚಿಸಿ ಸದಸ್ಯತನ ಅರ್ಜಿಗಳ ವಿವರವನ್ನು ಸಭೆಯ ಮುಂದಿಟ್ಟರು. ತೆರಿಗೆ ಪಾವತಿಗೆ ವಿಶೇಷ ಶ್ರಮ ವಹಿಸಿದ ಸಂಘದ ಕೋಶಾಧಿಕಾರಿ ವಸಂತ ಶೆಟ್ಟಿ ಶ್ರದ್ಧಾ ಇವರನ್ನು ಅಭಿನಂದಿಸಲಾಯಿತು. ತೆರಿಗೆ ಪಾವತಿಸಲು ಸಹಕರಿಸಿದ ಪ್ರಶಾಂತ್ ಶೆಟ್ಟಿ ಮಡಂತ್ಯಾರು ಹಾಗೂ ಎಲ್ಲಾ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸಲಾಯಿತು. ಯುವ ವಿಭಾಗಕ್ಕೆ ಆಯ್ಕೆಯಾದ ಪ್ರತೀಕ್ ಶೆಟ್ಟಿ ಮತ್ತು ಮಹಿಳಾ ವಿಭಾಗಕ್ಕೆ ಆಯ್ಕೆಯಾದ ಶ್ರೀಮತಿ ಜಯಲಕ್ಷ್ಮಿ ಸಾಮಾನಿ ಇವರ ತಂಡವನ್ನು ಅಭಿನಂದಿಸಲಾಯಿತು. ಸಂಘಟನಾ ಸಂಚಾಲಕರದ ಸೀತಾರಾಮ ಶೆಟ್ಟಿ ಕೆಂಬರ್ಜೆ ಹಾಗೂ ರಘುರಾಮ ಶೆಟ್ಟಿ ಸಾಧನ ಸಂಘಟನೆ ಹಾಗೂ ನೂತನ ವಲಯವರು ತಂಡ ರಚನೆಯ ಪ್ರಗತಿಯ ಬಗ್ಗೆ ಸಭೆಗೆ ವಿವರ ನೀಡಿದರು.

ಈ ಸಂಧರ್ಭದಲ್ಲಿ ವಿದ್ಯಾರ್ಥಿ ನಿಧಿ ಸಂಚಾಲಕರದ ಅಜಿತ್ ಕುಮಾರ್ ಕೊರ್ಯಾರು ಹಾಗೂ ರಾಧಾಕೃಷ್ಣ ಶೆಟ್ಟಿ ಅಂಬೆಟ್ಟು ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಬಗ್ಗೆ ವಿವರ ನೀಡಿದರು. ಈಗಾಗಲೇ ಆಯ್ಕೆಯಾದ ನೂತನ ವಲಯವಾರು ತಂಡಗಳನ್ನ ಅಭಿನಂದಿಸಲಾಯಿತು. ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಜಯರಾಮ ಶೆಟ್ಟಿ ಮುಂಡಾಡಿಗುತ್ತು, ಉಪಾಧ್ಯಕ್ಷ ನವೀನ್ ಸಾಮಾನಿ ಕರಂಬಾರುಬೀಡು ಉಪಸ್ಥಿತರಿದ್ದರು. ಜತೆಕಾರ್ಯದರ್ಶಿ ಕಿರಣ್ ಶೆಟ್ಟಿ ಧನ್ಯವಾದವಿತ್ತರು.

Related posts

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

Suddi Udaya

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ: ಎಸ್‌ಡಿಎಂ ಮಹಿಳಾ ಐಟಿಐ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಲಾಯಿಲ: ಶ್ರೀ ಗುರು ರಾಘವೇಂದ್ರ ಸ್ವಾಮಿ ಸೇವಾ ಪ್ರತಿಷ್ಠಾನದಿಂದ ಶ್ರೀ ಶನೇಶ್ವರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ನವೀನ ಗೋ-ಕಾರ್ಟ್ ಅಭಿವೃದ್ಧಿ

Suddi Udaya

ಶಾಸಕ ಹರೀಶ್ ಪೂಂಜಾ ಅಧ್ಯಕ್ಷತೆಯಲ್ಲಿ ಅಕ್ರಮ – ಸಕ್ರಮ ಸಮಿತಿ ಸಭೆ; ಅರ್ಹ 28  ಮಂದಿ  ಫಲಾನುಭವಿಗಳಿಗೆ 94 ಸಿ ಹಕ್ಕುಪತ್ರ  ವಿತರಣೆ

Suddi Udaya
error: Content is protected !!