25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಮನವಿ

ಬೆಳ್ತಂಗಡಿ: ಕರ್ನಾಟಕ ರಾಜ್ಯದ ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಉರ್ದು ಭಾಷೆಯನ್ನು ಆಯ್ಕೆ ಮಾಡದಿದ್ದರೆ ಅರ್ಜಿಯ ಮುಂದಿನ ಪ್ರಕ್ರಿಯೆ ಮಾಡಲು ಸಾಧ್ಯವಿಲ್ಲ. ಈ ಮೂಲಕ ಕರ್ನಾಟಕ ಸರ್ಕಾರ ಕ್ರೈಸ್ತರಿಗೆ ಹಾಗೂ ಹಿಂದುಗಳಿಗೆ ಒಂದು ರೀತಿಯಲ್ಲಿ ಅನ್ಯಾಯ ಮಾಡುತ್ತಿರುವುದು ಸ್ಪಷ್ಟ ಗಮನಕ್ಕೆ ಬರುತ್ತದೆ. ಕನ್ನಡವೇ ರಾಜ್ಯ ಭಾಷೆ. ಈ ರೀತಿ ಉರ್ದು ಭಾಷೆಗೆ ಕಡ್ಡಾಯ ಮಾಡಿ ಕನ್ನಡಿಗರನ್ನು ಸಹ ಅವಮಾನ ಮಾಡಿರುವುದು ಕಂಡುಬರುತ್ತದೆ. ಈ ಹುದ್ದೆಯನ್ನು ಪಡೆಯಬೇಕಾದರೆ ಉರ್ದು ಕಲಿಯುವ ಅನಿವಾರ್ಯತೆಯನ್ನು ಮಾಡಿ ಉರ್ದು ಭಾಷೆ ವೈಭವೀಕರಣವನ್ನು ಮಾಡುವ ಪ್ರಯತ್ನ ನಡೆಯುತ್ತಿದೆಯಾ ಎನ್ನುವಂತಹ ಪ್ರಶ್ನೆಯು ಮೂಡುತ್ತದೆ.

ಅಷ್ಟೇ ಅಲ್ಲದೆ ಕೇವಲ ಉರ್ದು ಭಾಷಿಕ ಮಹಿಳೆಯರೇ ಇನ್ನು ಅಂಗನವಾಡಿ ಕೇಂದ್ರಗಳನ್ನು ನಡೆಸಲು ಅವಕಾಶ ನೀಡಲಾಗುತ್ತಿದೆಯೇ? ಜೊತೆಗೆ ಈ ಹುದ್ದೆ ಇನ್ನು ಕೇವಲ ಅವರಿಗೆ ಮಾತ್ರ ಸೀಮಿತವೇ ಎಂಬ ಭೀತಿ ಈಗ ಜನರಲ್ಲಿ ನಿರ್ಮಾಣವಾಗಿದೆ! ಹಾಗಾಗಿ ಸಮಸ್ತ ಹಿಂದೂಗಳು ಇದರ ಬಗ್ಗೆ ಧ್ವನಿ ಎತ್ತುತ್ತಿದ್ದಾರೆ.

ಆದುದರಿಂದ ಇಲಾಖೆಯು ಈ ಆದೇಶವನ್ನು ಕೂಡಲೇ ಹಿಂಪಡೆದು ಜಾಲತಾಣದಲ್ಲಿ ಅವಶ್ಯಕ ಬದಲಾವಣೆ ಮಾಡಬೇಕೆಂದು ಹಿಂದೂ ಜನಜಾಗೃತಿ ವೇದಿಕೆಯ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಂ ಇವರಿಗೆ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ವಕೀಲರಾದ ಉದಯ ಬಿ.ಕೆ,. ಬಳಂಜ ಶ್ರೀ ನಾಗಬ್ರಹ್ಮ ದೇವಸ್ಥಾನ ಮೊಕ್ತೇಸರರು ಜಯ ಸಾಲಿಯಾನ್, ಸಂಜೀವ ಶೆಟ್ಟಿ ಉಜಿರೆ, ಶಿವರಾಮ್ ಉಜಿರೆ, ವಸಂತ ಬಂಗೇರ, ಶಶಿಧರ ಪೆರಿಯಡ್ಕ, ಎಂ. ಹರೀಶ್ ಜಿ ಉಪಸ್ಥಿತರಿದ್ದರು.

Related posts

ಮಾಜಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಅವರಿಂದ ಗುರುದ್ವಾರ ಭೇಟಿ

Suddi Udaya

ನಾವೂರು : ಕುಂಬಾರ ಸ್ವಜಾತಿ ಬಾಂಧವರ ಜಿಲ್ಲಾ ಮಟ್ಟದ ಬಿಡ್ಡಿಂಗ್ ಕ್ರಿಕೆಟ್ ಪಂದ್ಯಾಟ

Suddi Udaya

ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

Suddi Udaya

ಅರಿಕೆಗುಡ್ಡೆ ಸಭಾಭವನಕ್ಕೆ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. 5 ಲಕ್ಷ ಅನುದಾನ ಮಂಜೂರು

Suddi Udaya

ಜಿಲ್ಲಾ ರಾಜೋತ್ಸವ ಪುರಸ್ಕೃತ ವಸಂತಿ ನಿಡ್ಲೆ ಯವರಿಗೆ ಮೊಗೇರ ಸಂಘದಿಂದ ಸನ್ಮಾನ

Suddi Udaya
error: Content is protected !!