September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

ಸೂಳಬೆಟ್ಟು: ಯಾವುದೇ ಭಾಷೆಯಲ್ಲಿ ಅದರದೇ ಆದ ಸಂಸ್ಕೃತಿ, ಸೌಂದರ್ಯ ಅಡಕವಾಗಿರುತ್ತದೆ. ನಾವು ಕುಟುಂಬದ ಸದಸ್ಯರೊಂದಿಗೆ ನಮ್ಮದೇ ಮಾತೃ ಭಾಷೆಯಲ್ಲಿ ಯಾವುದೇ ಕಲಬೆರಕೆ ಇಲ್ಲದೆ ಮಾತನಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ಸಾಹಿತಿ ಮೈಸೂರು ಅನಂತ ತಾಮ್ಹನ್ಕಾರ್ ಹೇಳಿದರು.

ಅವರು ಸೆ.30 ರಂದು ಅಳದಂಗಡಿ ಸನಿಹದ ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ನಡೆದ ಅಂತರ್ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ ಮಾಡಿದರು.

ದಿನವೂ ಹೊಸ ಶಬ್ದಾರ್ಥಗಳನ್ನು ಅರಿಯುವುದರ ಜೊತೆಗೆ ಆಗಾಗ ಗದ್ಯ ಪದ್ಯಗಳನ್ನು ಬರೆಯುವ ಅಭ್ಯಾಸವನ್ನಿಟ್ಟುಕೊಂಡರೆ ಸಾಹಿತ್ಯ ಕೃಷಿಯಲ್ಲಿ ನಾವು ಏನನ್ನಾದರೂ ಸಾಧಿಸಬಹುದು ಎಂದು ಅವರು ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ಕವಿಗೋಷ್ಠಿ ನಡೆಸಿ ಸಮುದಾಯದ ಪ್ರತಿಭೆಗಳ ಅನಾವರಣಕ್ಕೆ ಅವಕಾಶ ಕೊಟ್ಟಿರುವುದನ್ನು ಶ್ಲಾಘಿಸಿದರು.


ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ವಹಿಸಿದ್ದರು. ಇದಕ್ಕೂ ಮೊದಲು ಕವಿಯತ್ರಿ ಸಂಧ್ಯಾ ಪಾಳಂದ್ಯೆ ಬೆಳ್ತಂಗಡಿ ಅವರು ಉದ್ಘಾಟಿಸಿದರು. ಗೋಷ್ಠಿಯಲ್ಲಿ 47 ಕವಿಗಳು ಸ್ವರಚಿತ ಕವನಗಳನ್ನು ವಾಚಿಸಿದರು. ಚಂದ್ರಕಾಂತ ಗೋರೆ, ದೀಪಕ ಆಠವಳೆ, ವಿವೇಕ ಕೇಳ್ಕರ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

Suddi Udaya

ಉತ್ತರ ಕನ್ನಡ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರವಾರದಲ್ಲಿ ಮೊದಲ ಜಿಲ್ಲಾ ಕಾರ್ಯಕಾರಿಣಿ ಸಭೆ

Suddi Udaya

ವೇಣೂರು : ಭಗವಾನ್ ಬಾಹುಬಲಿ ಸ್ವಾಮಿ ಮೂರ್ತಿಗೆ ಹೆಲಿಕಾಪ್ಟರ್ ಮೂಲಕ ಪುಪ್ಷವ್ರಷ್ಟಿ

Suddi Udaya

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಸೋಣಂದೂರು: ಕೊಲ್ಪದಬೈಲು ಸಮೀಪ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ: ಮೆಸ್ಕಾಂ ಇಲಾಖೆಯಿಂದ ತೆರವು ಕಾರ್ಯ

Suddi Udaya

ಮೇ. 13 ವಿಧಾನಸಭಾ ಚುನಾವಣಾ ಮತ ಎಣಿಕೆ: ದ.ಕ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Suddi Udaya
error: Content is protected !!