25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

ಉಜಿರೆ : ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಇದರ ಆಶ್ರಯದಲ್ಲಿ ನಡೆಯುವ ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾವಳಿ – 2024 ಇದರ ಉದ್ಘಾಟನಾ ಸಮಾರಂಭವು ಅ. 1ರಂದು ಉಜಿರೆ ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣ ನಡೆಯಿತು.

ಪ್ರೊ ಕಬಡ್ಡಿ ಆಟಗಾರ ರಥನ್ ಕೆ. ಎ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯಲ್ಲಿ ಸೋಲು ಗೆಲುವು ಇದ್ದೆ ಇರುತ್ತದೆ. ಎರಡನ್ನು ಸ್ವೀಕರಿಸಿ ಮುನ್ನಡೆಯುವಂತಹ ಕೆಲಸವನ್ನು ಮಾಡಬೇಕು ಎಂದು ಕ್ರೀಡಾ ಪಟುಗಳಿಗೆ ಶುಭಹಾರೈಸಿದರು.

ಪ್ರಾಂಶುಪಾಲರಾದ ಸಂತೋಷ್ ರವರು ಅಧ್ಯಕ್ಷತೆ ವಹಿಸಿ ಮಾತನಾಡಿ ಎಸ್ ಡಿ ಎಂ ಸಂಸ್ಥೆ ಶಿಕ್ಷಣದ ಜೊತೆ ಜೊತೆಗೆ ಕ್ರೀಡೆಯನ್ನು ಕೂಡ ಆಯೋಜಿಸಿಕೊಂಡು ಬಂದಿದೆ. ವಿದ್ಯಾರ್ಥಿಗಳಿಗೆ ಅವಕಾಶ ನೀಡಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಸೋಲು ಗೆಲುವು ಎರಡನ್ನು ಸ್ವೀಕರಿಸಿ ಎಂದು ಶುಭಹಾರೈಸಿದರು.

ವೇದಿಕೆಯಲ್ಲಿ ಉಜಿರೆ ಎಸ್ ಡಿ ಎಂ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್ ಹೆಚ್, ಎಸ್ ಡಿ ಎಂ ಸ್ಪೋರ್ಟ್ಸ್ ಕ್ಲಬ್ ಕಬಡ್ಡಿ ತರಬೇತುದಾರರಾದ ಕೃಷ್ಣಾನಂದಾ ರಾವ್, ದೈಹಿಕ ಶಿಕ್ಷಣ ಶಿಕ್ಷಕ ನಿತಿನ್ ಉಪಸ್ಥಿತರಿದ್ದರು.

ಕಾಲೇಜು ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸಂಪತ್ ಕುಮಾರ್ ನಿರೂಪಿಸಿದರು. ಮೆಕಾನಿಕಲ್ ವಿಭಾಗದ ಶ್ರೇಯಾಂಕ್ ಜೈನ್ ಸ್ವಾಗತಿಸಿ, ಸಿವಿಲ್ ವಿಭಾಗದ ಪ್ರವೀಣ್ ವಂದಿಸಿದರು.

Related posts

ದ.ಕ. ಜಿಲ್ಲಾ ಬಿ.ಎಂ.ಎಸ್ ವತಿಯಿಂದ ವಿಶ್ವಕರ್ಮ ಜಯಂತಿ ಅಂಗವಾಗಿ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಶಿರ್ಲಾಲು‌ ಗ್ರಾ.ಪಂ. ವಿಕಲಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಮಡಂತ್ಯಾರು: ಬುಲೆಟ್ ಟ್ಯಾಂಕರ್ ಮತ್ತು ಓಮ್ನಿ ಕಾರ್ ಮುಖಾಮುಖಿ ಡಿಕ್ಕಿ

Suddi Udaya

ಕೊಯ್ಯೂರು ಪ್ರೌಢಶಾಲಾ ರಜತ ಮಹೋತ್ಸವ: ಗುರುವಂದನಾ ಹಾಗೂ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಂಸ್ಕೃತ ಮತ್ತು ಗಣಿತ ವಿಭಾಗದ ಜಂಟಿ ಆಯೋಗದಲ್ಲಿ “ಗಣಿತ ಸಂಸ್ಕೃತ ಸಂಗಮ “

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲ ಹಾಗೂ ಮಹಿಳಾ ಮೋರ್ಚಾದ ಕಾರ್ಯಗಾರದ ಜೊತೆಯಲ್ಲಿ ಆಟಿಡೊಂಜಿ ದಿನ ಹಾಗೂ ಪೋಷನ್ ಪಕ್ವಾಡ್ ಕಾರ್ಯಕ್ರಮ,

Suddi Udaya
error: Content is protected !!