22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಆಶ್ರಯದಲ್ಲಿ ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

ಉಜಿರೆ : ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಇದರ ಆಶ್ರಯದಲ್ಲಿ ನಡೆಯುವ ದಕ್ಷಿಣ ಕನ್ನಡ, ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾ ಇಂಟರ್ – ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾವಳಿ – 2024 ಇದರ ಉದ್ಘಾಟನಾ ಸಮಾರಂಭವು ಅ. 1ರಂದು ಉಜಿರೆ ಇಂದ್ರಪ್ರಸ್ಥ ಒಳಾಂಗಣ ಕ್ರೀಡಾಂಗಣ ನಡೆಯಿತು.

ಪ್ರೊ ಕಬಡ್ಡಿ ಆಟಗಾರ ರಥನ್ ಕೆ. ಎ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯಲ್ಲಿ ಸೋಲು ಗೆಲುವು ಇದ್ದೆ ಇರುತ್ತದೆ. ಎರಡನ್ನು ಸ್ವೀಕರಿಸಿ ಮುನ್ನಡೆಯುವಂತಹ ಕೆಲಸವನ್ನು ಮಾಡಬೇಕು ಎಂದು ಕ್ರೀಡಾ ಪಟುಗಳಿಗೆ ಶುಭಹಾರೈಸಿದರು.

ಪ್ರಾಂಶುಪಾಲರಾದ ಸಂತೋಷ್ ರವರು ಅಧ್ಯಕ್ಷತೆ ವಹಿಸಿ ಮಾತನಾಡಿ ಎಸ್ ಡಿ ಎಂ ಸಂಸ್ಥೆ ಶಿಕ್ಷಣದ ಜೊತೆ ಜೊತೆಗೆ ಕ್ರೀಡೆಯನ್ನು ಕೂಡ ಆಯೋಜಿಸಿಕೊಂಡು ಬಂದಿದೆ. ವಿದ್ಯಾರ್ಥಿಗಳಿಗೆ ಅವಕಾಶ ನೀಡಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಸೋಲು ಗೆಲುವು ಎರಡನ್ನು ಸ್ವೀಕರಿಸಿ ಎಂದು ಶುಭಹಾರೈಸಿದರು.

ವೇದಿಕೆಯಲ್ಲಿ ಉಜಿರೆ ಎಸ್ ಡಿ ಎಂ ಸ್ಪೋರ್ಟ್ಸ್ ಕ್ಲಬ್ ಕಾರ್ಯದರ್ಶಿ ರಮೇಶ್ ಹೆಚ್, ಎಸ್ ಡಿ ಎಂ ಸ್ಪೋರ್ಟ್ಸ್ ಕ್ಲಬ್ ಕಬಡ್ಡಿ ತರಬೇತುದಾರರಾದ ಕೃಷ್ಣಾನಂದಾ ರಾವ್, ದೈಹಿಕ ಶಿಕ್ಷಣ ಶಿಕ್ಷಕ ನಿತಿನ್ ಉಪಸ್ಥಿತರಿದ್ದರು.

ಕಾಲೇಜು ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸಂಪತ್ ಕುಮಾರ್ ನಿರೂಪಿಸಿದರು. ಮೆಕಾನಿಕಲ್ ವಿಭಾಗದ ಶ್ರೇಯಾಂಕ್ ಜೈನ್ ಸ್ವಾಗತಿಸಿ, ಸಿವಿಲ್ ವಿಭಾಗದ ಪ್ರವೀಣ್ ವಂದಿಸಿದರು.

Related posts

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya

ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಾಗಬನದಲ್ಲಿ ನಾಗ ದೇವರಿಗೆ ತಂಬಿಲ ಸೇವೆ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಅಳದಂಗಡಿ: ಬರಾಯ ಅರಮನೆಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲ ಮಾಜಿ ಶಾಸಕಿ ರೂಪಾಲಿ ಎಸ್ ನಾಯ್ಕ ಭೇಟಿ

Suddi Udaya

ಉಜಿರೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿಶೇಷ ಗ್ರಾಮ ಸಭೆ

Suddi Udaya
error: Content is protected !!