September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

ನಾವರ: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ನಾವರ ಗೋಳಿಕಟ್ಟೆ ಇದರ ಪದಾಧಿಕಾರಿಗಳ ಆಯ್ಕೆಯು ಸೆ.29 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.


21 ನೇ ವರ್ಷದ ಶಾರದೋತ್ಸವ ಸಮಿತಿಯ ನೂತನ ಅಧ್ಯಕ್ಷರಾಗಿ ಹರೀಶ್ ಕುಲಾಲ್ ದೇವರಗುಡ್ಡೆ ಮತ್ತು ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಹಿಮರಡ್ಡ ಕುದ್ಯಾಡಿ ಇವರನ್ನು ಆಯ್ಕೆ ಮಾಡಲಾಗಿದೆ.


2024 ರ ಶಾರದಾ ಪೂಜಾ ಮಹೋತ್ಸವ ಅ.9 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿದ್ದು ಒಂದೇ ದಿನ ಪೂಜಾ ಕೆಲಸಕಾರ್ಯ ನಡೆಯಲಿದೆ.
ಸಂಜೆ ಅಳದಂಗಡಿ ಮಹಾಗಣಪತಿ ದೇವಸ್ಥಾನದ ಬಳಿ ಇರುವ ಫಲ್ಗುಣಿ ನದಿಯಲ್ಲಿ ಶಾರದಾ ದೇವಿ‌ ಮಣ್ಣಿನ ‌ಮೂರ್ತಿಯ ವಿಸರ್ಜನೆ ನಡೆಯಲಿರುವುದು.

ಸಭೆಯಲ್ಲಿ ಪ್ರಧಾನ ಸಂಚಾಲಕರಾದ ವಿಜಯ ಕುಮಾರ್ ಜೈನ್, ಸಂಚಾಲಕರಾದ ರಾಜೂ ಸಾಲ್ಯಾನ್, ವೀರೇಂದ್ರ ಕುಮಾರ್ ರಾಜಪಾದೆ, ರವಿ ಪೂಜಾರಿ ಹಾರಡ್ಡೆ, ನಿತ್ಯಾನಂದ ಯೋಗ ಕ್ಷೇಮ ನಾವರ, ಸದಾನಂದ ಬಿ.ಕುದ್ಯಾಡಿ ಮುಂತಾದವರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ದೀಪಾವಳಿ ಆಚರಣೆ

Suddi Udaya

ಮದ್ದಡ್ಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಆ.8: ವಿವೇಕಾನಂದ ವಿದ್ಯಾವರ್ಧಕ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕೃಷ್ಣ ಶೆಟ್ಟಿರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಶ್ರೀ ವಿಶ್ವಕರ್ಮ ಸೇವಾ ಸಂಘದ ಮಹಾಸಭೆ ಹಾಗೂ ವಿಶ್ವಕರ್ಮ ಪೂಜೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಪುತ್ತೂರಿನ ರಾಧಾ’ಸ್ ನಲ್ಲಿ ಆಫರ್‌ಗಳ ಬಿಗ್‌ಬಾಸ್: ರಾಧಾ’ಸ್ ಉತ್ಸವದ ಎರಡನೇ ವಾರದ ಡ್ರಾ.

Suddi Udaya
error: Content is protected !!