ಬೆಳ್ತಂಗಡಿ ಬಂಟರ ಸಂಘದ ಖಾಯಂ ಆಹ್ವಾನಿತರ, ನಿರ್ದೇಶಕ ಮಂಡಳಿ ಸಭೆ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ಖಾಯಂ ಆಹ್ವಾನಿತರ ಸಭೆಯು ಸೆ.29 ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಜಯಂತ ಶೆಟ್ಟಿ ಮಡಂತ್ಯಾರು ಇವರ ಅದ್ಯಕ್ಷತೆಯಲ್ಲಿ ಜರಗಿತು.

ಉಪಾಧ್ಯಕ್ಷ ಉಮೇಶ್ ಶೆಟ್ಟಿ ಉಜಿರೆ ಸ್ವಾಗತಿಸಿದರು. ಕಾರ್ಯದರ್ಶಿ ಸುರೇಶ್ ಶೆಟ್ಟಿ ವರದಿ ವಾಚಿಸಿ ಸದಸ್ಯತನ ಅರ್ಜಿಗಳ ವಿವರವನ್ನು ಸಭೆಯ ಮುಂದಿಟ್ಟರು. ತೆರಿಗೆ ಪಾವತಿಗೆ ವಿಶೇಷ ಶ್ರಮ ವಹಿಸಿದ ಸಂಘದ ಕೋಶಾಧಿಕಾರಿ ವಸಂತ ಶೆಟ್ಟಿ ಶ್ರದ್ಧಾ ಇವರನ್ನು ಅಭಿನಂದಿಸಲಾಯಿತು. ತೆರಿಗೆ ಪಾವತಿಸಲು ಸಹಕರಿಸಿದ ಪ್ರಶಾಂತ್ ಶೆಟ್ಟಿ ಮಡಂತ್ಯಾರು ಹಾಗೂ ಎಲ್ಲಾ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸಲಾಯಿತು. ಯುವ ವಿಭಾಗಕ್ಕೆ ಆಯ್ಕೆಯಾದ ಪ್ರತೀಕ್ ಶೆಟ್ಟಿ ಮತ್ತು ಮಹಿಳಾ ವಿಭಾಗಕ್ಕೆ ಆಯ್ಕೆಯಾದ ಶ್ರೀಮತಿ ಜಯಲಕ್ಷ್ಮಿ ಸಾಮಾನಿ ಇವರ ತಂಡವನ್ನು ಅಭಿನಂದಿಸಲಾಯಿತು. ಸಂಘಟನಾ ಸಂಚಾಲಕರದ ಸೀತಾರಾಮ ಶೆಟ್ಟಿ ಕೆಂಬರ್ಜೆ ಹಾಗೂ ರಘುರಾಮ ಶೆಟ್ಟಿ ಸಾಧನ ಸಂಘಟನೆ ಹಾಗೂ ನೂತನ ವಲಯವರು ತಂಡ ರಚನೆಯ ಪ್ರಗತಿಯ ಬಗ್ಗೆ ಸಭೆಗೆ ವಿವರ ನೀಡಿದರು.

ಈ ಸಂಧರ್ಭದಲ್ಲಿ ವಿದ್ಯಾರ್ಥಿ ನಿಧಿ ಸಂಚಾಲಕರದ ಅಜಿತ್ ಕುಮಾರ್ ಕೊರ್ಯಾರು ಹಾಗೂ ರಾಧಾಕೃಷ್ಣ ಶೆಟ್ಟಿ ಅಂಬೆಟ್ಟು ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಬಗ್ಗೆ ವಿವರ ನೀಡಿದರು. ಈಗಾಗಲೇ ಆಯ್ಕೆಯಾದ ನೂತನ ವಲಯವಾರು ತಂಡಗಳನ್ನ ಅಭಿನಂದಿಸಲಾಯಿತು. ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಜಯರಾಮ ಶೆಟ್ಟಿ ಮುಂಡಾಡಿಗುತ್ತು, ಉಪಾಧ್ಯಕ್ಷ ನವೀನ್ ಸಾಮಾನಿ ಕರಂಬಾರುಬೀಡು ಉಪಸ್ಥಿತರಿದ್ದರು. ಜತೆಕಾರ್ಯದರ್ಶಿ ಕಿರಣ್ ಶೆಟ್ಟಿ ಧನ್ಯವಾದವಿತ್ತರು.

Leave a Comment

error: Content is protected !!