July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಬಂಟರ ಸಂಘದ ಖಾಯಂ ಆಹ್ವಾನಿತರ, ನಿರ್ದೇಶಕ ಮಂಡಳಿ ಸಭೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ಖಾಯಂ ಆಹ್ವಾನಿತರ ಸಭೆಯು ಸೆ.29 ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ಜಯಂತ ಶೆಟ್ಟಿ ಮಡಂತ್ಯಾರು ಇವರ ಅದ್ಯಕ್ಷತೆಯಲ್ಲಿ ಜರಗಿತು.

ಉಪಾಧ್ಯಕ್ಷ ಉಮೇಶ್ ಶೆಟ್ಟಿ ಉಜಿರೆ ಸ್ವಾಗತಿಸಿದರು. ಕಾರ್ಯದರ್ಶಿ ಸುರೇಶ್ ಶೆಟ್ಟಿ ವರದಿ ವಾಚಿಸಿ ಸದಸ್ಯತನ ಅರ್ಜಿಗಳ ವಿವರವನ್ನು ಸಭೆಯ ಮುಂದಿಟ್ಟರು. ತೆರಿಗೆ ಪಾವತಿಗೆ ವಿಶೇಷ ಶ್ರಮ ವಹಿಸಿದ ಸಂಘದ ಕೋಶಾಧಿಕಾರಿ ವಸಂತ ಶೆಟ್ಟಿ ಶ್ರದ್ಧಾ ಇವರನ್ನು ಅಭಿನಂದಿಸಲಾಯಿತು. ತೆರಿಗೆ ಪಾವತಿಸಲು ಸಹಕರಿಸಿದ ಪ್ರಶಾಂತ್ ಶೆಟ್ಟಿ ಮಡಂತ್ಯಾರು ಹಾಗೂ ಎಲ್ಲಾ ನಿರ್ದೇಶಕರಿಗೆ ಕೃತಜ್ಞತೆ ಸಲ್ಲಿಸಲಾಯಿತು. ಯುವ ವಿಭಾಗಕ್ಕೆ ಆಯ್ಕೆಯಾದ ಪ್ರತೀಕ್ ಶೆಟ್ಟಿ ಮತ್ತು ಮಹಿಳಾ ವಿಭಾಗಕ್ಕೆ ಆಯ್ಕೆಯಾದ ಶ್ರೀಮತಿ ಜಯಲಕ್ಷ್ಮಿ ಸಾಮಾನಿ ಇವರ ತಂಡವನ್ನು ಅಭಿನಂದಿಸಲಾಯಿತು. ಸಂಘಟನಾ ಸಂಚಾಲಕರದ ಸೀತಾರಾಮ ಶೆಟ್ಟಿ ಕೆಂಬರ್ಜೆ ಹಾಗೂ ರಘುರಾಮ ಶೆಟ್ಟಿ ಸಾಧನ ಸಂಘಟನೆ ಹಾಗೂ ನೂತನ ವಲಯವರು ತಂಡ ರಚನೆಯ ಪ್ರಗತಿಯ ಬಗ್ಗೆ ಸಭೆಗೆ ವಿವರ ನೀಡಿದರು.

ಈ ಸಂಧರ್ಭದಲ್ಲಿ ವಿದ್ಯಾರ್ಥಿ ನಿಧಿ ಸಂಚಾಲಕರದ ಅಜಿತ್ ಕುಮಾರ್ ಕೊರ್ಯಾರು ಹಾಗೂ ರಾಧಾಕೃಷ್ಣ ಶೆಟ್ಟಿ ಅಂಬೆಟ್ಟು ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಬಗ್ಗೆ ವಿವರ ನೀಡಿದರು. ಈಗಾಗಲೇ ಆಯ್ಕೆಯಾದ ನೂತನ ವಲಯವಾರು ತಂಡಗಳನ್ನ ಅಭಿನಂದಿಸಲಾಯಿತು. ವೇದಿಕೆಯಲ್ಲಿ ನಿಕಟಪೂರ್ವ ಅಧ್ಯಕ್ಷ ಜಯರಾಮ ಶೆಟ್ಟಿ ಮುಂಡಾಡಿಗುತ್ತು, ಉಪಾಧ್ಯಕ್ಷ ನವೀನ್ ಸಾಮಾನಿ ಕರಂಬಾರುಬೀಡು ಉಪಸ್ಥಿತರಿದ್ದರು. ಜತೆಕಾರ್ಯದರ್ಶಿ ಕಿರಣ್ ಶೆಟ್ಟಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಬೆ

Suddi Udaya

ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ.ಎ ರಹಿಮಾನ್ ಅವರಿಗೆ ಪತ್ನಿ‌ ವಿಯೋಗ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಭೇಟಿ

Suddi Udaya

ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯ ಕುಂಟಿನಿ ಬೂತ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳಾಲು: ಶ್ರೀಮತಿ ಸುಲೋಚನಾ ಎಸ್. ಕೆರ್ಮುಣ್ಣಾಯ ನಿಧನ

Suddi Udaya
error: Content is protected !!