32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಮನವಿ

ಬೆಳ್ತಂಗಡಿ: ಕರ್ನಾಟಕ ರಾಜ್ಯದ ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಉರ್ದು ಭಾಷೆಯನ್ನು ಆಯ್ಕೆ ಮಾಡದಿದ್ದರೆ ಅರ್ಜಿಯ ಮುಂದಿನ ಪ್ರಕ್ರಿಯೆ ಮಾಡಲು ಸಾಧ್ಯವಿಲ್ಲ. ಈ ಮೂಲಕ ಕರ್ನಾಟಕ ಸರ್ಕಾರ ಕ್ರೈಸ್ತರಿಗೆ ಹಾಗೂ ಹಿಂದುಗಳಿಗೆ ಒಂದು ರೀತಿಯಲ್ಲಿ ಅನ್ಯಾಯ ಮಾಡುತ್ತಿರುವುದು ಸ್ಪಷ್ಟ ಗಮನಕ್ಕೆ ಬರುತ್ತದೆ. ಕನ್ನಡವೇ ರಾಜ್ಯ ಭಾಷೆ. ಈ ರೀತಿ ಉರ್ದು ಭಾಷೆಗೆ ಕಡ್ಡಾಯ ಮಾಡಿ ಕನ್ನಡಿಗರನ್ನು ಸಹ ಅವಮಾನ ಮಾಡಿರುವುದು ಕಂಡುಬರುತ್ತದೆ. ಈ ಹುದ್ದೆಯನ್ನು ಪಡೆಯಬೇಕಾದರೆ ಉರ್ದು ಕಲಿಯುವ ಅನಿವಾರ್ಯತೆಯನ್ನು ಮಾಡಿ ಉರ್ದು ಭಾಷೆ ವೈಭವೀಕರಣವನ್ನು ಮಾಡುವ ಪ್ರಯತ್ನ ನಡೆಯುತ್ತಿದೆಯಾ ಎನ್ನುವಂತಹ ಪ್ರಶ್ನೆಯು ಮೂಡುತ್ತದೆ.

ಅಷ್ಟೇ ಅಲ್ಲದೆ ಕೇವಲ ಉರ್ದು ಭಾಷಿಕ ಮಹಿಳೆಯರೇ ಇನ್ನು ಅಂಗನವಾಡಿ ಕೇಂದ್ರಗಳನ್ನು ನಡೆಸಲು ಅವಕಾಶ ನೀಡಲಾಗುತ್ತಿದೆಯೇ? ಜೊತೆಗೆ ಈ ಹುದ್ದೆ ಇನ್ನು ಕೇವಲ ಅವರಿಗೆ ಮಾತ್ರ ಸೀಮಿತವೇ ಎಂಬ ಭೀತಿ ಈಗ ಜನರಲ್ಲಿ ನಿರ್ಮಾಣವಾಗಿದೆ! ಹಾಗಾಗಿ ಸಮಸ್ತ ಹಿಂದೂಗಳು ಇದರ ಬಗ್ಗೆ ಧ್ವನಿ ಎತ್ತುತ್ತಿದ್ದಾರೆ.

ಆದುದರಿಂದ ಇಲಾಖೆಯು ಈ ಆದೇಶವನ್ನು ಕೂಡಲೇ ಹಿಂಪಡೆದು ಜಾಲತಾಣದಲ್ಲಿ ಅವಶ್ಯಕ ಬದಲಾವಣೆ ಮಾಡಬೇಕೆಂದು ಹಿಂದೂ ಜನಜಾಗೃತಿ ವೇದಿಕೆಯ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಂ ಇವರಿಗೆ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ವಕೀಲರಾದ ಉದಯ ಬಿ.ಕೆ,. ಬಳಂಜ ಶ್ರೀ ನಾಗಬ್ರಹ್ಮ ದೇವಸ್ಥಾನ ಮೊಕ್ತೇಸರರು ಜಯ ಸಾಲಿಯಾನ್, ಸಂಜೀವ ಶೆಟ್ಟಿ ಉಜಿರೆ, ಶಿವರಾಮ್ ಉಜಿರೆ, ವಸಂತ ಬಂಗೇರ, ಶಶಿಧರ ಪೆರಿಯಡ್ಕ, ಎಂ. ಹರೀಶ್ ಜಿ ಉಪಸ್ಥಿತರಿದ್ದರು.

Related posts

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya

ವ್ಯಾಪಕ ಮಳೆ ಹಿನ್ನಲೆ: ನಾಳೆ(ಜು.31) ದ.ಕ. ಜಿಲ್ಲಾದ್ಯಂತ ಶಾಲೆ, ಪ.ಪೂ. ಕಾಲೇಜುಗಳಿಗೆ ರಜೆ

Suddi Udaya

ಸೆ.22ರಿಂದ ಅ.1: ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ (ರಿ.), ಗಂಡಿಬಾಗಿಲು ಇಲ್ಲಿ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬ ಆಚರಣೆ

Suddi Udaya

ಆ.4: ಆಟಿ ಅಮಾವಾಸ್ಯೆ ಪ್ರಯುಕ್ತ ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಆಟಿದ ಕಷಾಯ ವಿತರಣೆ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya
error: Content is protected !!