22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸುವಂತೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಹಶೀಲ್ದಾರರಿಗೆ ಮನವಿ

ಬೆಳ್ತಂಗಡಿ: ಕರ್ನಾಟಕ ರಾಜ್ಯದ ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಉರ್ದು ಭಾಷೆಯನ್ನು ಆಯ್ಕೆ ಮಾಡದಿದ್ದರೆ ಅರ್ಜಿಯ ಮುಂದಿನ ಪ್ರಕ್ರಿಯೆ ಮಾಡಲು ಸಾಧ್ಯವಿಲ್ಲ. ಈ ಮೂಲಕ ಕರ್ನಾಟಕ ಸರ್ಕಾರ ಕ್ರೈಸ್ತರಿಗೆ ಹಾಗೂ ಹಿಂದುಗಳಿಗೆ ಒಂದು ರೀತಿಯಲ್ಲಿ ಅನ್ಯಾಯ ಮಾಡುತ್ತಿರುವುದು ಸ್ಪಷ್ಟ ಗಮನಕ್ಕೆ ಬರುತ್ತದೆ. ಕನ್ನಡವೇ ರಾಜ್ಯ ಭಾಷೆ. ಈ ರೀತಿ ಉರ್ದು ಭಾಷೆಗೆ ಕಡ್ಡಾಯ ಮಾಡಿ ಕನ್ನಡಿಗರನ್ನು ಸಹ ಅವಮಾನ ಮಾಡಿರುವುದು ಕಂಡುಬರುತ್ತದೆ. ಈ ಹುದ್ದೆಯನ್ನು ಪಡೆಯಬೇಕಾದರೆ ಉರ್ದು ಕಲಿಯುವ ಅನಿವಾರ್ಯತೆಯನ್ನು ಮಾಡಿ ಉರ್ದು ಭಾಷೆ ವೈಭವೀಕರಣವನ್ನು ಮಾಡುವ ಪ್ರಯತ್ನ ನಡೆಯುತ್ತಿದೆಯಾ ಎನ್ನುವಂತಹ ಪ್ರಶ್ನೆಯು ಮೂಡುತ್ತದೆ.

ಅಷ್ಟೇ ಅಲ್ಲದೆ ಕೇವಲ ಉರ್ದು ಭಾಷಿಕ ಮಹಿಳೆಯರೇ ಇನ್ನು ಅಂಗನವಾಡಿ ಕೇಂದ್ರಗಳನ್ನು ನಡೆಸಲು ಅವಕಾಶ ನೀಡಲಾಗುತ್ತಿದೆಯೇ? ಜೊತೆಗೆ ಈ ಹುದ್ದೆ ಇನ್ನು ಕೇವಲ ಅವರಿಗೆ ಮಾತ್ರ ಸೀಮಿತವೇ ಎಂಬ ಭೀತಿ ಈಗ ಜನರಲ್ಲಿ ನಿರ್ಮಾಣವಾಗಿದೆ! ಹಾಗಾಗಿ ಸಮಸ್ತ ಹಿಂದೂಗಳು ಇದರ ಬಗ್ಗೆ ಧ್ವನಿ ಎತ್ತುತ್ತಿದ್ದಾರೆ.

ಆದುದರಿಂದ ಇಲಾಖೆಯು ಈ ಆದೇಶವನ್ನು ಕೂಡಲೇ ಹಿಂಪಡೆದು ಜಾಲತಾಣದಲ್ಲಿ ಅವಶ್ಯಕ ಬದಲಾವಣೆ ಮಾಡಬೇಕೆಂದು ಹಿಂದೂ ಜನಜಾಗೃತಿ ವೇದಿಕೆಯ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಾದ ಪೃಥ್ವಿ ಸಾನಿಕಂ ಇವರಿಗೆ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ವಕೀಲರಾದ ಉದಯ ಬಿ.ಕೆ,. ಬಳಂಜ ಶ್ರೀ ನಾಗಬ್ರಹ್ಮ ದೇವಸ್ಥಾನ ಮೊಕ್ತೇಸರರು ಜಯ ಸಾಲಿಯಾನ್, ಸಂಜೀವ ಶೆಟ್ಟಿ ಉಜಿರೆ, ಶಿವರಾಮ್ ಉಜಿರೆ, ವಸಂತ ಬಂಗೇರ, ಶಶಿಧರ ಪೆರಿಯಡ್ಕ, ಎಂ. ಹರೀಶ್ ಜಿ ಉಪಸ್ಥಿತರಿದ್ದರು.

Related posts

ಶ್ರೀ ಕೃಷ್ಣ ಕುಂಬಾರರ ಗೆಳೆಯರ ಬಳಗ, ಚಾರ್ಮಾಡಿ ವಲಯ : ಸ್ವ ಜಾತಿ ಬಾಂಧವರ ಮಾಗಣೆ ಮಟ್ಟದ ಹೊನಲು ಬೆಳಕಿನ ಹಗ್ಗಜಗ್ಗಾಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುತ್ಲೂರು ಕಡಬಾಗಿಲು ಸೇತುವೆ ನಿರ್ಮಾಣಕ್ಕೆ ಮತ್ತೆ ವಿಘ್ನು : ಸದ್ಯಕಿಲ್ಲ ಕಾಮಗಾರಿ ಭಾಗ್ಯ…

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

Suddi Udaya

ಮರೋಡಿ: ಮಡ್ಲದಲ್ಲಿ ಬರೆ ಕುಸಿತ ಮನೆಗೆ ಹಾನಿ

Suddi Udaya

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya
error: Content is protected !!