23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

ಸೂಳಬೆಟ್ಟು: ಯಾವುದೇ ಭಾಷೆಯಲ್ಲಿ ಅದರದೇ ಆದ ಸಂಸ್ಕೃತಿ, ಸೌಂದರ್ಯ ಅಡಕವಾಗಿರುತ್ತದೆ. ನಾವು ಕುಟುಂಬದ ಸದಸ್ಯರೊಂದಿಗೆ ನಮ್ಮದೇ ಮಾತೃ ಭಾಷೆಯಲ್ಲಿ ಯಾವುದೇ ಕಲಬೆರಕೆ ಇಲ್ಲದೆ ಮಾತನಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ಸಾಹಿತಿ ಮೈಸೂರು ಅನಂತ ತಾಮ್ಹನ್ಕಾರ್ ಹೇಳಿದರು.

ಅವರು ಸೆ.30 ರಂದು ಅಳದಂಗಡಿ ಸನಿಹದ ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವಸ್ಥಾನದ ವಠಾರದಲ್ಲಿ ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ನಡೆದ ಅಂತರ್ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ ಮಾಡಿದರು.

ದಿನವೂ ಹೊಸ ಶಬ್ದಾರ್ಥಗಳನ್ನು ಅರಿಯುವುದರ ಜೊತೆಗೆ ಆಗಾಗ ಗದ್ಯ ಪದ್ಯಗಳನ್ನು ಬರೆಯುವ ಅಭ್ಯಾಸವನ್ನಿಟ್ಟುಕೊಂಡರೆ ಸಾಹಿತ್ಯ ಕೃಷಿಯಲ್ಲಿ ನಾವು ಏನನ್ನಾದರೂ ಸಾಧಿಸಬಹುದು ಎಂದು ಅವರು ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ಕವಿಗೋಷ್ಠಿ ನಡೆಸಿ ಸಮುದಾಯದ ಪ್ರತಿಭೆಗಳ ಅನಾವರಣಕ್ಕೆ ಅವಕಾಶ ಕೊಟ್ಟಿರುವುದನ್ನು ಶ್ಲಾಘಿಸಿದರು.


ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್ ವಹಿಸಿದ್ದರು. ಇದಕ್ಕೂ ಮೊದಲು ಕವಿಯತ್ರಿ ಸಂಧ್ಯಾ ಪಾಳಂದ್ಯೆ ಬೆಳ್ತಂಗಡಿ ಅವರು ಉದ್ಘಾಟಿಸಿದರು. ಗೋಷ್ಠಿಯಲ್ಲಿ 47 ಕವಿಗಳು ಸ್ವರಚಿತ ಕವನಗಳನ್ನು ವಾಚಿಸಿದರು. ಚಂದ್ರಕಾಂತ ಗೋರೆ, ದೀಪಕ ಆಠವಳೆ, ವಿವೇಕ ಕೇಳ್ಕರ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ: ಬೆಳ್ತಂಗಡಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಮೆರವಣಿಗೆ- ರಾಷ್ಟ್ರಪತಿಗೆ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡೆರೆಗೌಜಿ-ಗಮ್ಮತ್ ಉದ್ಘಾಟನೆ: ಮಾಜಿ ಸೈನಿಕರಿಗೆ ಸಂಘದ ವತಿಯಿಂದ ಗೌರವಾಪ೯ಣೆ – ಆದ್ದೂರಿಯಾಗಿ ನಡೆದ ತುಳು ಜಾನಪದ ಶೈಲಿಯ ಪಥ ಸಂಚಲನ

Suddi Udaya

ವೇಣೂರು: ಮಹಾಮಸ್ತಕಾಭಿಷೇಕ ಸಂಪನ್ನ

Suddi Udaya

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

Suddi Udaya
error: Content is protected !!