24.1 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

ಇಂದಬೆಟ್ಟು: ಇಲ್ಲಿಯ ಅರ್ಧನಾರೀಶ್ವರ ದೇವಸ್ಥಾನದ ದ್ವಾರದಿಂದ ದೇವಸ್ಥಾನದವರೆಗೆ ಹಾಕಿದ ಪೈಪ್ ಲೈನ್ ಗಳು ಒಡೆದು ಹೋಗಿ ಹಲವು ದಿನಗಳಿಂದ ಆ ಪರಿಸರದ ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಆದರೆ ಪಂಚಾಯತ್ ನವರು ಈವರೆಗೆ ಪೈಪ್ ದುರಸ್ತಿಗೊಳಿಸದೆ ಇದ್ದುದರಿಂದ ಪಂಚಾಯತ್ ನ ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರವರು ಅ.2 ರಂದು ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಗ್ರಾ.ಪಂ. ಅಧ್ಯಕ್ಷೆ ಆಶಾಲತ ರವರು ದೇವಸ್ಥಾನ ಬಳಿ ಕೆಲಸಗಳು ನಡೆಯುತ್ತಿರುವ ಸಂದರ್ಭ ವಾಹನಗಳು ಸಂಚರಿಸುವಾಗ ಪೈಪ್ ಗಳು ಒಡೆದುಹೋಗಿರುತ್ತದೆ. ಇವುಗಳನ್ನು ಹಲವಾರು ಭಾರಿ ದುರಸ್ತಿ ಮಾಡಲಾಗಿತ್ತು, ಈಗ ದೇವಸ್ಥಾನದ ಬಳಿಯ ಕೆಲಸ ಮುಗಿದಿದ್ದು ನಾಳೆ (ಅ.3 ) ಒಡೆದು ಹೋದ ಪೈಪ್ ಗಳನ್ನು ದುರಸ್ತಿಗೊಳಿಸುವುದಾಗಿ ಈಗಾಗಲೇ ವೆಂಕಪ್ಪ ಕೋಟ್ಯಾನ್ ರವರಿಗೆ ತಿಳಿಸಲಾಗಿತ್ತು ಎಂದರು.

Related posts

ಬೆಳ್ತಂಗಡಿ: ಖಾಸಗಿ ಬಸ್ ನೌಕರರ ಸಂಘ ಜಿಲ್ಲಾ ಘಟಕದ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya

ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ: ಅಧ್ಯಕ್ಷ ಗಾದಿ ಕಳೆದುಕೊಂಡ ಪುದುವೆಟ್ಟು ಗ್ರಾಪಂ ಅಧ್ಯಕ್ಷೆ ಅನಿತಾ ಕುಮಾರಿ – ಉಪಾಧ್ಯಕ್ಷ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಐತಿಹಾಸಿಕ ಕಾರ್ಯಕ್ರಮ: ಸ್ವಸಹಾಯ ಸಂಘಗಳಿಗೆ ರೂ.605 ಕೋಟಿ ಲಾಭಾಂಶ ವಿತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Suddi Udaya
error: Content is protected !!