July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

ಇಂದಬೆಟ್ಟು: ಇಲ್ಲಿಯ ಅರ್ಧನಾರೀಶ್ವರ ದೇವಸ್ಥಾನದ ದ್ವಾರದಿಂದ ದೇವಸ್ಥಾನದವರೆಗೆ ಹಾಕಿದ ಪೈಪ್ ಲೈನ್ ಗಳು ಒಡೆದು ಹೋಗಿ ಹಲವು ದಿನಗಳಿಂದ ಆ ಪರಿಸರದ ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಆದರೆ ಪಂಚಾಯತ್ ನವರು ಈವರೆಗೆ ಪೈಪ್ ದುರಸ್ತಿಗೊಳಿಸದೆ ಇದ್ದುದರಿಂದ ಪಂಚಾಯತ್ ನ ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರವರು ಅ.2 ರಂದು ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಗ್ರಾ.ಪಂ. ಅಧ್ಯಕ್ಷೆ ಆಶಾಲತ ರವರು ದೇವಸ್ಥಾನ ಬಳಿ ಕೆಲಸಗಳು ನಡೆಯುತ್ತಿರುವ ಸಂದರ್ಭ ವಾಹನಗಳು ಸಂಚರಿಸುವಾಗ ಪೈಪ್ ಗಳು ಒಡೆದುಹೋಗಿರುತ್ತದೆ. ಇವುಗಳನ್ನು ಹಲವಾರು ಭಾರಿ ದುರಸ್ತಿ ಮಾಡಲಾಗಿತ್ತು, ಈಗ ದೇವಸ್ಥಾನದ ಬಳಿಯ ಕೆಲಸ ಮುಗಿದಿದ್ದು ನಾಳೆ (ಅ.3 ) ಒಡೆದು ಹೋದ ಪೈಪ್ ಗಳನ್ನು ದುರಸ್ತಿಗೊಳಿಸುವುದಾಗಿ ಈಗಾಗಲೇ ವೆಂಕಪ್ಪ ಕೋಟ್ಯಾನ್ ರವರಿಗೆ ತಿಳಿಸಲಾಗಿತ್ತು ಎಂದರು.

Related posts

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya

ಗೇರುಕಟ್ಟೆ ಜಾರಿಗೆಬೈಲು ನಿವಾಸಿ ಶಕುಂತಳಾ ನಿಧನ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

Suddi Udaya

ಕಾಂಗ್ರೆಸ್ ನ ಓಲೈಕೆ ರಾಜಕಾರಣದಿಂದ ಶರಣ್ ಪಂಪುವೆಲ್ ರವರ ಮೇಲೆ ಕೇಸು ಖಂಡನೀಯ : ನವೀನ್ ನೆರಿಯ

Suddi Udaya

ಮಚ್ಚಿನ: ತಾರೆಮಾರು ಸೇತುವೆಯ ಬಳಿ ವಾಮಾಚಾರಕ್ಕೆ ಬಳಸಿದ ವಸ್ತುಗಳನ್ನು ಎಸೆಯುವ ಬಗ್ಗೆ ಸ್ಥಳೀಯರ ಅಕ್ರೋಶ

Suddi Udaya

ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

Suddi Udaya
error: Content is protected !!