24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

ಉಜಿರೆ : ಗಾಂಧೀಜಿಯವರ ತತ್ವಗಳು ನಶಿಸಿ ಹೋಗಿವೆ ಆದರೆ ಅವರ ಕೆಲವು ತತ್ವಗಳು ಇವತ್ತಿಗೂ ಪಾಲಿಸುತ್ತಾರೆ ಸತ್ಯವನ್ನು ಹೇಳಬೇಕು ,ಸರಳವಾಗಿರಬೇಕು, ನಮ್ಮ ಕೆಲಸವನ್ನು ನಾವೇ ಮಾಡಬೇಕು ಒಂದು ಕೆನ್ನೆಗೆ ಒಡೆದಾಗ ಇನ್ನೊಂದು ಕೆನ್ನೆ ತೋರಿಸಬೇಕು ಎಂದು ರೆಸಿಡೆನ್ಸಿಯಲ್ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ತಿಳಿಸಿದರು.


ಅವರು ಅ. 2 ರಂದು ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿಧ್ಯಾರ್ಥಿನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ನಡೆದ ಗಾಂಧೀಜಿಜಯಂತಿ ಕಾರ್ಯಕ್ರಮದಲ್ಲಿ ಪುಷ್ಪನಮನ ಮಾಡಿ ಮುಖ್ಯ ಅಥಿತಿ ಸ್ಥಾನದಿಂದ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ರತ್ನಮಾನಸ ವಸತಿ ನಿಲಯದ ಪಾಲಕರಾದ ಯತೀಶ್ ಕೆ ಬಳಂಜರವರು ಮಾತನಾಡಿ ಕೆಲವನ್ನು ನೋಡುವುದರ ಮೂಲಕ ಕಲಿಯಬೇಕು ಕೆಲವನ್ನು ಮಾಡುವುದರ ಮೂಲಕ ಕಲಿಯಬೇಕು. ಮಾರ್ಕ್ಸ್ ಗಿಂತ ರಿಮಾರ್ಕ್ ಇಲ್ಲದೆ ಬದುಕುವುದು ಉತ್ತಮ.
ಇತ್ತಿಚೀನ ದಿನಗಳಲ್ಲಿ ಮಕ್ಕಳಿಗೆ ಶಿಕ್ಷಣ ದ ಜೊತೆಗೆ ಜೀವನ ಶಿಕ್ಷಣ ಅಗತ್ಯ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ರೆಸಿಡೆನ್ಸಿಯಲ್ ಕಾಲೇಜಿನ ಪಾಂಶುಪಾಲರಾದ ಸುನಿಲ್ ಪಂಡಿತ್ ಸ್ವಾಗತಿಸಿ ರತ್ನಮಾನಸದ ಅದ್ಯಪಕರಾದ ರವಿಚಂದ್ರರವರು ಧನ್ಯವಾದ ಸಲ್ಲಿಸಿದರು.


ಕಾರ್ಯಕ್ರಮದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಪಾಲಕಾರದ ವಿಶ್ವನಾಥ ಹಾಗೂ ಶಿಕ್ಷಕರಾದ ಅಕಿಲ್ ,ರೋಷನ್ ,ಉಮೇಶ್ ಮತ್ತು ರತ್ನಮಾನಸ ದ ಶಿಕ್ಷಕರಾದ ಉದಯರಾಜ್ ,ದೀಪಕ್ ಕೆ ಉಪಸ್ಥಿತರಿದ್ದರು.

Related posts

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಮಾಸಿಕ ಸಭೆ ಮತ್ತು ಇಫ್ತಾರ್ ಸಮ್ಮಿಲನ

Suddi Udaya

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಮಾನ ಮಾಡದಂತೆ ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ ತಾಲ್ಲೂಕಿನ 76 ಕೆರೆಗಳ ಗಡಿ ಗುರುತಿಸಿ ಗ್ರಾಮ ಪಂಚಾಯಿತ್ ಹಾಗೂ ಪಟ್ಟಣ ಪಂಚಾಯತ್ ಹಸ್ತಾಂತರ: ವಿಧಾನ ಪರಿಷತ್ ನಲ್ಲಿ ಹರೀಶ್ ಕುಮಾರ್ ಪ್ರಶ್ನೆಗೆ ಸಚಿವರ ಉತ್ತರ

Suddi Udaya

ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಆರ್ ಎಸ್ ಎಸ್ ಮುಖಂಡ ಡಾ.ಪ್ರಭಾಕರ ಭಟ್ ಕಲ್ಲಡ್ಕ

Suddi Udaya
error: Content is protected !!