25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

ಉಜಿರೆ : ಗಾಂಧೀಜಿಯವರ ತತ್ವಗಳು ನಶಿಸಿ ಹೋಗಿವೆ ಆದರೆ ಅವರ ಕೆಲವು ತತ್ವಗಳು ಇವತ್ತಿಗೂ ಪಾಲಿಸುತ್ತಾರೆ ಸತ್ಯವನ್ನು ಹೇಳಬೇಕು ,ಸರಳವಾಗಿರಬೇಕು, ನಮ್ಮ ಕೆಲಸವನ್ನು ನಾವೇ ಮಾಡಬೇಕು ಒಂದು ಕೆನ್ನೆಗೆ ಒಡೆದಾಗ ಇನ್ನೊಂದು ಕೆನ್ನೆ ತೋರಿಸಬೇಕು ಎಂದು ರೆಸಿಡೆನ್ಸಿಯಲ್ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ತಿಳಿಸಿದರು.


ಅವರು ಅ. 2 ರಂದು ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿಧ್ಯಾರ್ಥಿನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ನಡೆದ ಗಾಂಧೀಜಿಜಯಂತಿ ಕಾರ್ಯಕ್ರಮದಲ್ಲಿ ಪುಷ್ಪನಮನ ಮಾಡಿ ಮುಖ್ಯ ಅಥಿತಿ ಸ್ಥಾನದಿಂದ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ರತ್ನಮಾನಸ ವಸತಿ ನಿಲಯದ ಪಾಲಕರಾದ ಯತೀಶ್ ಕೆ ಬಳಂಜರವರು ಮಾತನಾಡಿ ಕೆಲವನ್ನು ನೋಡುವುದರ ಮೂಲಕ ಕಲಿಯಬೇಕು ಕೆಲವನ್ನು ಮಾಡುವುದರ ಮೂಲಕ ಕಲಿಯಬೇಕು. ಮಾರ್ಕ್ಸ್ ಗಿಂತ ರಿಮಾರ್ಕ್ ಇಲ್ಲದೆ ಬದುಕುವುದು ಉತ್ತಮ.
ಇತ್ತಿಚೀನ ದಿನಗಳಲ್ಲಿ ಮಕ್ಕಳಿಗೆ ಶಿಕ್ಷಣ ದ ಜೊತೆಗೆ ಜೀವನ ಶಿಕ್ಷಣ ಅಗತ್ಯ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ರೆಸಿಡೆನ್ಸಿಯಲ್ ಕಾಲೇಜಿನ ಪಾಂಶುಪಾಲರಾದ ಸುನಿಲ್ ಪಂಡಿತ್ ಸ್ವಾಗತಿಸಿ ರತ್ನಮಾನಸದ ಅದ್ಯಪಕರಾದ ರವಿಚಂದ್ರರವರು ಧನ್ಯವಾದ ಸಲ್ಲಿಸಿದರು.


ಕಾರ್ಯಕ್ರಮದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಪಾಲಕಾರದ ವಿಶ್ವನಾಥ ಹಾಗೂ ಶಿಕ್ಷಕರಾದ ಅಕಿಲ್ ,ರೋಷನ್ ,ಉಮೇಶ್ ಮತ್ತು ರತ್ನಮಾನಸ ದ ಶಿಕ್ಷಕರಾದ ಉದಯರಾಜ್ ,ದೀಪಕ್ ಕೆ ಉಪಸ್ಥಿತರಿದ್ದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಟ್ಟಿಗೆ ಬೆಂಕಿ ತಗುಲಿ ಕಂಬಳ ಕೋಣಗಳು ಸಾವು

Suddi Udaya

ಉಜಿರೆ: ಶ್ರೀ. ಧ. ಮಂ ಆಂ.ಮಾ. ಶಾಲೆಯಲ್ಲಿ ವಾರ್ಷಿಕೋತ್ಸವದ ಅಂಗವಾಗಿ ಛದ್ಮವೇಶ ಸ್ಪರ್ಧೆ

Suddi Udaya

ಜು. 22-23: ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಮನೆಗೆ ತಹಶೀಲ್ದಾರ್ ಭೇಟಿ: ಅಜ್ಜಿಗೆ ವಾಸ್ತವ್ಯ ದೃಢೀಕರಣ ಪತ್ರ, ಆಹಾರ ಸಾಮಾಗ್ರಿ ಕಿಟ್ ವಿತರಣೆ: ಸುದ್ದಿ ಉದಯ ಸ್ಪೆಷಲ್ ರಿಪೋರ್ಟ್ Effect

Suddi Udaya
error: Content is protected !!