25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಗಾಂಧೀಜಿ ಜಯಂತಿ ಆಚರಣೆ

ಉಜಿರೆ : ಗಾಂಧೀಜಿಯವರ ತತ್ವಗಳು ನಶಿಸಿ ಹೋಗಿವೆ ಆದರೆ ಅವರ ಕೆಲವು ತತ್ವಗಳು ಇವತ್ತಿಗೂ ಪಾಲಿಸುತ್ತಾರೆ ಸತ್ಯವನ್ನು ಹೇಳಬೇಕು ,ಸರಳವಾಗಿರಬೇಕು, ನಮ್ಮ ಕೆಲಸವನ್ನು ನಾವೇ ಮಾಡಬೇಕು ಒಂದು ಕೆನ್ನೆಗೆ ಒಡೆದಾಗ ಇನ್ನೊಂದು ಕೆನ್ನೆ ತೋರಿಸಬೇಕು ಎಂದು ರೆಸಿಡೆನ್ಸಿಯಲ್ ಕಾಲೇಜಿನ ಪ್ರಾಂಶುಪಾಲರಾದ ಸುನಿಲ್ ಪಂಡಿತ್ ತಿಳಿಸಿದರು.


ಅವರು ಅ. 2 ರಂದು ಉಜಿರೆ ರತ್ನಮಾನಸ ಜೀವನ ಶಿಕ್ಷಣ ವಿಧ್ಯಾರ್ಥಿನಿಲಯದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ನಡೆದ ಗಾಂಧೀಜಿಜಯಂತಿ ಕಾರ್ಯಕ್ರಮದಲ್ಲಿ ಪುಷ್ಪನಮನ ಮಾಡಿ ಮುಖ್ಯ ಅಥಿತಿ ಸ್ಥಾನದಿಂದ ಮಾತನಾಡಿದರು.

ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ರತ್ನಮಾನಸ ವಸತಿ ನಿಲಯದ ಪಾಲಕರಾದ ಯತೀಶ್ ಕೆ ಬಳಂಜರವರು ಮಾತನಾಡಿ ಕೆಲವನ್ನು ನೋಡುವುದರ ಮೂಲಕ ಕಲಿಯಬೇಕು ಕೆಲವನ್ನು ಮಾಡುವುದರ ಮೂಲಕ ಕಲಿಯಬೇಕು. ಮಾರ್ಕ್ಸ್ ಗಿಂತ ರಿಮಾರ್ಕ್ ಇಲ್ಲದೆ ಬದುಕುವುದು ಉತ್ತಮ.
ಇತ್ತಿಚೀನ ದಿನಗಳಲ್ಲಿ ಮಕ್ಕಳಿಗೆ ಶಿಕ್ಷಣ ದ ಜೊತೆಗೆ ಜೀವನ ಶಿಕ್ಷಣ ಅಗತ್ಯ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ರೆಸಿಡೆನ್ಸಿಯಲ್ ಕಾಲೇಜಿನ ಪಾಂಶುಪಾಲರಾದ ಸುನಿಲ್ ಪಂಡಿತ್ ಸ್ವಾಗತಿಸಿ ರತ್ನಮಾನಸದ ಅದ್ಯಪಕರಾದ ರವಿಚಂದ್ರರವರು ಧನ್ಯವಾದ ಸಲ್ಲಿಸಿದರು.


ಕಾರ್ಯಕ್ರಮದಲ್ಲಿ ರೆಸಿಡೆನ್ಸಿಯಲ್ ಕಾಲೇಜಿನ ಪಾಲಕಾರದ ವಿಶ್ವನಾಥ ಹಾಗೂ ಶಿಕ್ಷಕರಾದ ಅಕಿಲ್ ,ರೋಷನ್ ,ಉಮೇಶ್ ಮತ್ತು ರತ್ನಮಾನಸ ದ ಶಿಕ್ಷಕರಾದ ಉದಯರಾಜ್ ,ದೀಪಕ್ ಕೆ ಉಪಸ್ಥಿತರಿದ್ದರು.

Related posts

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಬೆಳ್ತಂಗಡಿ ಬಂಟರ ಸಂಘದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಎ.ಸದಾನಂದ ಶೆಟ್ಟಿ ರವರಿಗೆ ಗೌರವಾರ್ಪಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಮಲವಂತಿಗೆ : 38ನೇ ವರ್ಷದ ಶ್ರೀವಿದ್ಯಾ ಗಣಪತಿ ಪೂಜ್ಯೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!