April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಲ್ಲಿ ಗಾಂಧಿ ಜಯಂತಿ ಆಚರಣೆ

ಬೆಳ್ತಂಗಡಿ: ಗಾಂಧೀಜಿ ಭಾರತಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ನಾಯಕರು ಗಾಂಧೀಜಿಯವರ ಸಮಯಪ್ರಜ್ಞೆ ಸರಳ ಜೀವನ ಸೇವಾ ಮನೋಭಾವ ಸ್ವಚ್ಛತೆ ನುಡಿದಂತೆ ನಡೆದ ಅವರ ಬದುಕು ನಮಗೆಲ್ಲಾ ಪ್ರಯಾಣ ಈಗ ಪ್ರೇರಣೆಯಾಗಬೇಕು ಎಂದು ನಿವೃತ್ತ ಉಪನ್ಯಾಸಕರು ದ.ಕ ಗಮಕ ಕಲಾ ಪರಿಷತ್ತು ಅಧ್ಯಕ್ಷ ಮಧೂರು ಮೋಹನ ಕಲ್ಲೂರಾಯ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದರು.

ಮಹಾತ್ಮ ಗಾಂಧೀಜಿಯವರು ನಮ್ಮನ್ನು ಅಗಲಿ ಎಷ್ಟೋ ವರ್ಷಗಳಾದರೂ, ಅವರು ಬಿಟ್ಟುಹೋದ ಆದರ್ಶಗಳು ಇಂದಿಗೂ, ಎಂದೆಂದಿಗೂ ಪ್ರಸ್ತುತ. ನಮ್ಮ ಮೇಲೆ ಗಾಢವಾಗಿ ಪರಿಣಾಮ ಬೀರಿದ ಗಾಂಧಿಜೀಯವರ ಸತ್ಯ, ಅಹಿಂಸೆ, ಶಾಂತಿ ಹಾಗೂ ಸರಳ ಜೀವನ. ಈ ಸಂದೇಶಗಳನ್ನು ಎಲ್ಲರೂ ಪಾಲಿಸಿಬಿಟ್ಟರೆ ಜಗತ್ತಿನ ಎಷ್ಟೋ ಸಮಸ್ಯೆಗಳು ಪರಿಹಾರವಾಗುತ್ತವೆ.
ಇಂದು ನಮಗೆ ಜಗತ್ತಿನಲ್ಲಿ ಶಾಂತಿ ಬೇಕಾಗಿದೆ. ಹಿಂಸೆಯಿಂದ ಸಾಧಿಸುವಂಥದ್ದು ಏನೂ ಇಲ್ಲ. ಶಾಂತಿಯಿಂದಲೇ ಬಗೆಹರಿಸಿಕೊಳ್ಳಬೇಕು. ನಮ್ಮ ಹೋರಾಟ, ಚಳವಳಿಗಳೂ ಅಹಿಂಸಾಮಾರ್ಗದಲ್ಲಿಯೇ ಸಾಗಲಿ ಎಂಬ ಮೇಲ್ಪಂಕ್ತಿ ಹಾಕಿದವರು ಬಾಪೂಜಿ ಎಂದರು.

ಈ ಸಂದರ್ಭದಲ್ಲಿ ಉಭಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣ, ಕೆ.ಎಮ್ ನಾಗೇಶ್ ಕುಮಾರ್ ಗೌಡ ,ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್ ,ಜಿಲ್ಲಾ ಗ್ಯಾರಂಟಿ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಸೇವಾದಳದ ಅಧ್ಯಕ್ಷ ಪ್ರದೀಪ್ ಕೆ ಸಿ ಗ್ರಾಮೀಣ ಎಸ್ ಸಿ ಘಟಕದ ಅಧ್ಯಕ್ಷ ನೇಮಿರಾಜ್ ಕಿಲ್ಲೂರು, ಜಿಲ್ಲಾ ಅರೋಗ್ಯ್ರ ರಕ್ಷಾ ಸಮಿತಿಯ ಸದಸ್ಯರಾದ ಅಬ್ದುಲ್‌ ಕರೀಮ್ ಗೇರುಕಟ್ಟೆ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ವಂದಾನ ಭಂಡಾರಿ ಹಾಗೂ ಸರ್ಕಾರದ ನಾಮನಿರ್ದೇಶಿತ ಸದಸ್ಯರು ,ಪಕ್ಷದ ವಿವಿಧ ಸಮಿತಿಯ ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಕನ್ಯಾಡಿ : ಶ್ರೀ ರಾಮ ಕ್ಷೇತ್ರಕ್ಕೆ ಶ್ರೀ ವಿವೇಕಾನಂದ ವಿದ್ಯಾವರ್ಧಕ ಸಂಸ್ಥೆಯ ಅಧ್ಯಕ್ಷ ಡಾ| ಕಲ್ಲಡ್ಕ ಪ್ರಭಾಕರ ಭಟ್ ಭೇಟಿ

Suddi Udaya

ಡಿ.3: ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ ಆಶ್ರಯದಲ್ಲಿ ಬಂಟೋತ್ಸವ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ

Suddi Udaya

ಪಡಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ರಕ್ಷಾಬಂಧನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ :ಎಂಟನೇ ಸುತ್ತಿನಲ್ಲಿ 7906 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಬೆಳ್ತಂಗಡಿ ಯಲ್ಲಿ ಡಾ| ರಂಜನ್ ಕುಮಾರ್ ಅವರ ಅನುಗ್ರಹ ಕ್ಲಿನಿಕ್ ಶುಭಾರಂಭ     

Suddi Udaya

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!