March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಅ.2 ರಂದು ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮವು ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಗೊಂಡಿತು. ಶಾಲಾ ಸಹ ಶಿಕ್ಷಕಿಯಾದ ಕುಮಾರಿ ಜೀವಿತರವರು ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯ ಮಹತ್ವವನ್ನು ವಿವರಿಸಿದ್ದರು. ನಂತರ ಶಾಲಾ ಸಂಚಾಲಕರಾದ ವಂ|ಸ್ವಾ|ಸ್ಟ್ಯಾನಿ ಗೋವಿಯಸ್ ರವರು, ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸರವರು, ಎಲ್ಲಾ ಶಿಕ್ಷಕ-ಶಿಕ್ಷಕೇತರ ವೃಂದದದವರು ಹಾಗೂ ವಿದ್ಯಾರ್ಥಿಗಳು ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿದರು.

ಶಾಲಾ ಸಂಚಾಲಕರಾದ ವಂ|ಸ್ವಾ|ಸ್ಟ್ಯಾನಿ ಗೋವಿಯಸ್ ರವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ನಾವು ಸ್ವಚ್ಛತೆಗೆ ಪ್ರಾಮುಖ್ಯತೆಯನ್ನು ಕೊಡಬೇಕು, ನಮ್ಮ ಸುತ್ತಮುತ್ತಲಿನ ಪರಿಸರವನ್ನು ನಾವು ಸ್ವಚ್ಛವಾಗಿ ಇಡಬೇಕು ಎಂದು ಹೇಳಿ, ಮಕ್ಕಳಿಗೆ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿಯ ಶುಭಾಶಯಗಳು ಕೋರಿದರು. ನಂತರ ಎಲ್ಲಾ ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕಾರ್ಯಕ್ರಮವನ್ನು ಸಹ ಶಿಕ್ಷಕಿಯಾದ ಶ್ರೀಮತಿ ಹರಿಣಾಕ್ಷಿರವರು ನಿರೂಪಿಸಿ, ಕುಮಾರಿ ಪೂಜಶ್ರೀರವರು ಸ್ವಾಗತಿಸಿ, ಶ್ರೀಮತಿ ಆಶಾಲತಾ ರವರು ಧನ್ಯವಾದವಿತ್ತರು.

Related posts

ಪುಂಜಾಲಕಟ್ಟೆ ಪ್ರ.ದ. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಧರ್ಮಸ್ಥಳ: ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya

ಚಾರ್ಮಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯನ್ನು ದ್ವಿಪಥವನ್ನಾಗಿ ಅಭಿವೃದ್ಧಿಪಡಿಸಲು ಕೇಂದ್ರ ಸರ್ಕಾರದಿಂದ ರೂ. 343.74 ಕೋಟಿ ಅನುದಾನ ಬಿಡುಗಡೆ: ಸಂಸದ ಕ್ಯಾ. ಬ್ರಿಜೇಶ್ ಚೌಟ

Suddi Udaya

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ಉಜಿರೆ: ಇಂಟರಾಕ್ಟ್ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
error: Content is protected !!