38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

ಇಂದಬೆಟ್ಟು: ಇಲ್ಲಿಯ ಅರ್ಧನಾರೀಶ್ವರ ದೇವಸ್ಥಾನದ ದ್ವಾರದಿಂದ ದೇವಸ್ಥಾನದವರೆಗೆ ಹಾಕಿದ ಪೈಪ್ ಲೈನ್ ಗಳು ಒಡೆದು ಹೋಗಿ ಹಲವು ದಿನಗಳಿಂದ ಆ ಪರಿಸರದ ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಆದರೆ ಪಂಚಾಯತ್ ನವರು ಈವರೆಗೆ ಪೈಪ್ ದುರಸ್ತಿಗೊಳಿಸದೆ ಇದ್ದುದರಿಂದ ಪಂಚಾಯತ್ ನ ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರವರು ಅ.2 ರಂದು ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಗ್ರಾ.ಪಂ. ಅಧ್ಯಕ್ಷೆ ಆಶಾಲತ ರವರು ದೇವಸ್ಥಾನ ಬಳಿ ಕೆಲಸಗಳು ನಡೆಯುತ್ತಿರುವ ಸಂದರ್ಭ ವಾಹನಗಳು ಸಂಚರಿಸುವಾಗ ಪೈಪ್ ಗಳು ಒಡೆದುಹೋಗಿರುತ್ತದೆ. ಇವುಗಳನ್ನು ಹಲವಾರು ಭಾರಿ ದುರಸ್ತಿ ಮಾಡಲಾಗಿತ್ತು, ಈಗ ದೇವಸ್ಥಾನದ ಬಳಿಯ ಕೆಲಸ ಮುಗಿದಿದ್ದು ನಾಳೆ (ಅ.3 ) ಒಡೆದು ಹೋದ ಪೈಪ್ ಗಳನ್ನು ದುರಸ್ತಿಗೊಳಿಸುವುದಾಗಿ ಈಗಾಗಲೇ ವೆಂಕಪ್ಪ ಕೋಟ್ಯಾನ್ ರವರಿಗೆ ತಿಳಿಸಲಾಗಿತ್ತು ಎಂದರು.

Related posts

ಫೆ.7-10: ಶಿಶಿಲ ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಮುಂಡಾಜೆ: ಸೊಮಂತ್ತಡ್ಕ ನಿವಾಸಿ ಸಾವಿತ್ರಿ ನಿಧನ

Suddi Udaya

ಮರೋಡಿ: ಊರವರಿಂದ ಶ್ರಮದಾನ, ಕಳೆಗಿಡಗಂಟಿಗಳ ತೆರವು

Suddi Udaya

ಮರೋಡಿ ಗ್ರಾಮ ಪಂಚಾಯತ್ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಧ್ವಜಸ್ತಂಭದ ಸ್ಥಾಪನೆ

Suddi Udaya

ಬೆಳ್ತಂಗಡಿ: ವಾತ್ಸಲ್ಯ ಕುಟುಂಬದ ಸದಸ್ಯರಿಗೆ ದಿನ ಬಳಕೆಯ ವಸ್ತು ಹಾಗೂ ಆಹಾರ ಕಿಟ್ ವಿತರಣೆ

Suddi Udaya
error: Content is protected !!