23.8 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

ಇಂದಬೆಟ್ಟು: ಇಲ್ಲಿಯ ಅರ್ಧನಾರೀಶ್ವರ ದೇವಸ್ಥಾನದ ದ್ವಾರದಿಂದ ದೇವಸ್ಥಾನದವರೆಗೆ ಹಾಕಿದ ಪೈಪ್ ಲೈನ್ ಗಳು ಒಡೆದು ಹೋಗಿ ಹಲವು ದಿನಗಳಿಂದ ಆ ಪರಿಸರದ ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಆದರೆ ಪಂಚಾಯತ್ ನವರು ಈವರೆಗೆ ಪೈಪ್ ದುರಸ್ತಿಗೊಳಿಸದೆ ಇದ್ದುದರಿಂದ ಪಂಚಾಯತ್ ನ ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರವರು ಅ.2 ರಂದು ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಗ್ರಾ.ಪಂ. ಅಧ್ಯಕ್ಷೆ ಆಶಾಲತ ರವರು ದೇವಸ್ಥಾನ ಬಳಿ ಕೆಲಸಗಳು ನಡೆಯುತ್ತಿರುವ ಸಂದರ್ಭ ವಾಹನಗಳು ಸಂಚರಿಸುವಾಗ ಪೈಪ್ ಗಳು ಒಡೆದುಹೋಗಿರುತ್ತದೆ. ಇವುಗಳನ್ನು ಹಲವಾರು ಭಾರಿ ದುರಸ್ತಿ ಮಾಡಲಾಗಿತ್ತು, ಈಗ ದೇವಸ್ಥಾನದ ಬಳಿಯ ಕೆಲಸ ಮುಗಿದಿದ್ದು ನಾಳೆ (ಅ.3 ) ಒಡೆದು ಹೋದ ಪೈಪ್ ಗಳನ್ನು ದುರಸ್ತಿಗೊಳಿಸುವುದಾಗಿ ಈಗಾಗಲೇ ವೆಂಕಪ್ಪ ಕೋಟ್ಯಾನ್ ರವರಿಗೆ ತಿಳಿಸಲಾಗಿತ್ತು ಎಂದರು.

Related posts

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya

ಮುಂಡೂರು: ಕರುವಿನ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

Suddi Udaya

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಬಂಗೇರರು ಕೊನೆಯ ಬಾರಿ ವಿಧಾನಸೌಧಕ್ಕೆ ಭೇಟಿ ನೀಡಿ ಶಿಫಾರಸ್ಸು ಮಾಡಿದ ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿ ಗೌರವ ನೀಡಿದ ಮುಖ್ಯಮಂತ್ರಿಗಳು

Suddi Udaya
error: Content is protected !!