22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಕುಡಿಯುವ ನೀರಿಗಾಗಿ ಗ್ರಾ.ಪಂ. ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರಿಂದ ಪಂಚಾಯತ್ ಎದುರು ಪ್ರತಿಭಟನೆ: ಶೀಘ್ರವಾಗಿ ದುರಸ್ತಿ ಮಾಡಿಸಿಕೊಡುವುದಾಗಿ ಗ್ರಾ.ಪಂ. ಅಧ್ಯಕ್ಷೆ ಭರವಸೆ

ಇಂದಬೆಟ್ಟು: ಇಲ್ಲಿಯ ಅರ್ಧನಾರೀಶ್ವರ ದೇವಸ್ಥಾನದ ದ್ವಾರದಿಂದ ದೇವಸ್ಥಾನದವರೆಗೆ ಹಾಕಿದ ಪೈಪ್ ಲೈನ್ ಗಳು ಒಡೆದು ಹೋಗಿ ಹಲವು ದಿನಗಳಿಂದ ಆ ಪರಿಸರದ ಜನರು ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಆದರೆ ಪಂಚಾಯತ್ ನವರು ಈವರೆಗೆ ಪೈಪ್ ದುರಸ್ತಿಗೊಳಿಸದೆ ಇದ್ದುದರಿಂದ ಪಂಚಾಯತ್ ನ ಮಾಜಿ ಸದಸ್ಯ ವೆಂಕಪ್ಪ ಕೋಟ್ಯಾನ್ ರವರು ಅ.2 ರಂದು ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಗ್ರಾ.ಪಂ. ಅಧ್ಯಕ್ಷೆ ಆಶಾಲತ ರವರು ದೇವಸ್ಥಾನ ಬಳಿ ಕೆಲಸಗಳು ನಡೆಯುತ್ತಿರುವ ಸಂದರ್ಭ ವಾಹನಗಳು ಸಂಚರಿಸುವಾಗ ಪೈಪ್ ಗಳು ಒಡೆದುಹೋಗಿರುತ್ತದೆ. ಇವುಗಳನ್ನು ಹಲವಾರು ಭಾರಿ ದುರಸ್ತಿ ಮಾಡಲಾಗಿತ್ತು, ಈಗ ದೇವಸ್ಥಾನದ ಬಳಿಯ ಕೆಲಸ ಮುಗಿದಿದ್ದು ನಾಳೆ (ಅ.3 ) ಒಡೆದು ಹೋದ ಪೈಪ್ ಗಳನ್ನು ದುರಸ್ತಿಗೊಳಿಸುವುದಾಗಿ ಈಗಾಗಲೇ ವೆಂಕಪ್ಪ ಕೋಟ್ಯಾನ್ ರವರಿಗೆ ತಿಳಿಸಲಾಗಿತ್ತು ಎಂದರು.

Related posts

ಮಾ.7: ಡಿಪಿ ಸ್ಫೋರ್ಟ್ಸ್ ಕ್ಲಬ್‌ ಬೆಳಾಲು ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಮುಗ್ಗ ಗುತ್ತುವಿನಲ್ಲಿ ಪೀತಾಂಬರ ಹೇರಾಜೆಯವರ 75 ನೇ ವರ್ಷದ ಹುಟ್ಟುಹಬ್ಬ ಆಚರಣೆ

Suddi Udaya

ಕರ್ನೋಡಿ  ಸ.ಉ. ಪ್ರಾ. ಶಾಲೆಯಲ್ಲಿ  ನವೀಕೃತ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದ ಬ್ರಹ್ಮ ಕಲಶೋತ್ಸವದ 5ನೇ ದಿನದ ಧಾರ್ಮಿಕ ಸಭೆ

Suddi Udaya

ಗುರುವಾಯನಕೆರೆ ಶ್ರೀ ವೇದವ್ಯಾಸ ಶಿಶುಮಂದಿರದ ವಾರ್ಷಿಕೋತ್ಸವ-ಶಿಶು ಸಂಭ್ರಮ

Suddi Udaya
error: Content is protected !!